ಜೈಶಂಕರ್‌ ಮಾತುಕತೆ ಬೆನ್ನಲ್ಲೇ, ಚೀನಾ-ಪಾಕ್‌-ತಾಲಿಬಾನ್‌ ತ್ರಿಪಕ್ಷೀಯ ಸಭೆ

ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ತಾಲಿಬಾನ್‌ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ  ಜೊತೆ ಮಾತುಕತೆ ನಡೆಸಿದ ಕೆಲವೇ ದಿನಗಳಲ್ಲಿ, ಚೀನಾ ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳ ವಿದೇಶಾಂಗ ಸಚಿವರನ್ನು ಬೀಜಿಂಗ್‌ಗೆ ಕರೆದು ತ್ರಿಪಕ್ಷೀಯ ಸಭೆ ನಡೆಸಿದೆ

ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ತಾಲಿಬಾನ್‌ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ  ಜೊತೆ ಮಾತುಕತೆ ನಡೆಸಿದ ಕೆಲವೇ ದಿನಗಳಲ್ಲಿ, ಚೀನಾ ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳ ವಿದೇಶಾಂಗ ಸಚಿವರನ್ನು ಬೀಜಿಂಗ್‌ಗೆ ಕರೆದು ತ್ರಿಪಕ್ಷೀಯ ಸಭೆ ನಡೆಸಿದೆ. ಈ ಹಿಂದೆಂದೂ ಇರದ ರೀತಿಯಲ್ಲಿ ಚೀನಾ ಈ ಪ್ರದೇಶದ ರಾಜಕೀಯದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸುತ್ತಿದೆ.  

ಚೀನಾದ ತ್ರಿಪಕ್ಷೀಯ ಸಭೆ: ಏನು ನಿರ್ಧಾರಗಳು?  

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮುಖ್ಯವಾಗಿ ಮೂರು ವಿಷಯಗಳು ಚರ್ಚೆಯಾದವು:  

1. CPEC ಅನ್ನು ಅಫ್ಘಾನಿಸ್ತಾನಕ್ಕೆ ವಿಸ್ತರಿಸುವುದು– ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಅನ್ನು ಈಗ ಅಫ್ಘಾನಿಸ್ತಾನದೊಳಗೆ ವಿಸ್ತರಿಸಲು ಒಪ್ಪಂದವಾಗಿದೆ.  

2. ಪರಸ್ಪರ ರಾಯಭಾರಿಗಳ ನೇಮಕ– ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಮ್ಮ ರಾಯಭಾರಿಗಳನ್ನು ಪುನಃ ನಿಯೋಜಿಸಲು ಒಪ್ಪಿಕೊಂಡಿವೆ.  

3. ಭಯೋತ್ಪಾದನೆ ವಿರುದ್ಧ ಹೋರಾಟ– ಪ್ರಾದೇಶಿಕ ಶಾಂತಿಗಾಗಿ ಭಯೋತ್ಪಾದಕ ಗುಂಪುಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡಲು ನಿರ್ಧಾರ.  

ಹಿನ್ನೆಲೆ:

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಸಂಬಂಧ ಇತ್ತೀಚೆಗೆ ಹದಗೆಟ್ಟಿತ್ತು. ಕಳೆದ ಡಿಸೆಂಬರ್‌ನಲ್ಲಿ ಪಾಕಿಸ್ತಾನದ ವಾಯುಪಡೆ ಅಫ್ಘಾನ್‌ನ ಪಕ್ತಿಕಾ ಪ್ರಾಂತ್ಯದಲ್ಲಿ ಬಾಂಬ್ ದಾಳಿ ನಡೆಸಿ 50 ಜನರನ್ನು ಕೊಂದಿತ್ತು. ಅಷ್ಟೇ ಅಲ್ಲದೆ, ಪಾಕಿಸ್ತಾನ ಸಾವಿರಾರು ಅಫ್ಘಾನ್ ನಿರಾಶ್ರಿತರನ್ನು ಗಡೀಪಾರು ಮಾಡುತ್ತಿದೆ. ಸದ್ಯ ಈದೀಗ  ಚೀನಾ ತನ್ನ ಪ್ರಭಾವವನ್ನು ಬಳಸಿ ಎರಡೂ ದೇಶಗಳ ನಡುವೆ ಸಂಧಾನ ಮಾಡಲು ಪ್ರಯತ್ನಿಸಿದೆ.  

ಕಳೆದ ವಾರ ಜೈಶಂಕರ್ ತಾಲಿಬಾನ್‌ನ ವಿದೇಶಾಂಗ ಸಚಿವರೊಂದಿಗೆ ಮೊದಲ ಬಾರಿಗೆ ದೂರವಾಣಿ ಮಾತುಕತೆ ನಡೆಸಿದ್ದರು. ತಾಲಿಬಾನ್‌ ಆಡಳಿತದ ಮಾನ್ಯತೆಗೆ ಇದು ಭಾರತದ ಮೊದಲ ಹಂತವಾಗಿತ್ತು. ಆದರೆ, ಚೀನಾ ಈಗ ಈ ಪ್ರಕ್ರಿಯೆಯಲ್ಲಿ ತಲೆಹಾಕಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸುತ್ತಿದೆ.  

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »