ಅರಮನೆ ಮೈದಾನ ಜಮೀನು ವಿವಾದ: ಸುಪ್ರೀಂ ಕೋರ್ಟ್‌ಲ್ಲಿ ರಾಜ್ಯ ಸರಕಾರಕ್ಕೆ ಭಾರೀ ಹಿನ್ನಡೆ

ಬೆಂಗಳೂರಿನ ಅರಮನೆ ಮೈದಾನಕ್ಕೆ ಸಂಬಂಧಿಸಿದ 15 ಎಕರೆ ಜಾಗವನ್ನು ರಸ್ತೆ ಅಗಲೀಕರಣಕ್ಕಾಗಿ ವಶಪಡಿಸಿಕೊಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೈಸೂರು ಒಡೆಯರ್ ಕುಟುಂಬಕ್ಕೆ ₹3,400 ಕೋಟಿ ಟಿಡಿಆರ್ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

ನವದೆಹಲಿ: ಬೆಂಗಳೂರಿನ ಅರಮನೆ ಮೈದಾನಕ್ಕೆ ಸಂಬಂಧಿಸಿದ 15 ಎಕರೆ ಜಾಗವನ್ನು ರಸ್ತೆ ಅಗಲೀಕರಣಕ್ಕಾಗಿ ವಶಪಡಿಸಿಕೊಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೈಸೂರು ಒಡೆಯರ್ ಕುಟುಂಬಕ್ಕೆ ₹3,400 ಕೋಟಿ ಮೌಲ್ಯದ ವರ್ಗಾಯಿಸಬಲ್ಲ ಅಭಿವೃದ್ಧಿ ಹಕ್ಕುಪತ್ರ (TDR) ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಈ ತೀರ್ಪಿನಿಂದ ರಾಜ್ಯ ಸರ್ಕಾರಕ್ಕೆ ಭಾರೀ ಆರ್ಥಿಕ ಹೊರೆಯಾಗಿದ್ದು, ಗಮನಾರ್ಹ ಹಿನ್ನಡೆಯಾಗಿದೆ.

ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯ ಅಗಲೀಕರಣಕ್ಕಾಗಿ ಅರಮನೆ ಮೈದಾನದ 15 ಎಕರೆ ಜಾಗವನ್ನು 1994ರಲ್ಲಿ ಸರ್ಕಾರ ವಶಪಡಿಸಿಕೊಂಡಿತ್ತು. ಈ ಜಾಗಕ್ಕೆ ₹1 ಲಕ್ಷ ಕೋಟಿಗೂ ಅಧಿಕ ಮೌಲ್ಯದ TDR ನೀಡಬೇಕೆಂದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕುಟುಂಬವು ಮನವಿ ಮಾಡಿದ್ದರು. ಆದರೆ, ರಾಜ್ಯ ಸರ್ಕಾರವು ಈ ಬೇಡಿಕೆಯನ್ನು ತಿರಸ್ಕರಿಸಿತ್ತು, ಇದರಿಂದಾಗಿ ಒಡೆಯರ್ ಕುಟುಂಬವು ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಹೈಕೋರ್ಟ್ ರಾಜ್ಯ ಸರ್ಕಾರದ ಪರವಾಗಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಒಡೆಯರ್ ಕುಟುಂಬವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯ ಸರ್ಕಾರವು ತನ್ನ ವಾದದಲ್ಲಿ, “1994ರಲ್ಲಿ ಜಾಗವನ್ನು ವಶಪಡಿಸಿಕೊಳ್ಳಲಾಯಿತಾದರೂ, ಒಡೆಯರ್ ಕುಟುಂಬವು 2024ರ ಮಾರುಕಟ್ಟೆ ಮೌಲ್ಯದ ಆಧಾರದಲ್ಲಿ ಪರಿಹಾರ ಕೇಳುತ್ತಿದ್ದಾರೆ. ಅರಮನೆ ಮೈದಾನದ ಒಟ್ಟು 462 ಎಕರೆ ಜಾಗಕ್ಕೆ ₹1 ಲಕ್ಷ ಕೋಟಿಗೂ ಅಧಿಕ ಮೊತ್ತವನ್ನು ನೀಡುವುದು ಸಾಧ್ಯವಿಲ್ಲ,” ಎಂದು ವಾದಿಸಿತ್ತು. ಆದರೆ, ಸುಪ್ರೀಂ ಕೋರ್ಟ್‌ ಈ ವಾದವನ್ನು ತಿರಸ್ಕರಿಸಿ, ₹3,400 ಕೋಟಿ ಮೌಲ್ಯದ TDR ನೀಡುವಂತೆ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, 2025ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಒಂದು ವಾರದೊಳಗೆ TDR ನೀಡುವಂತೆ ಆದೇಶಿಸಿತ್ತು. ಆದರೆ, ಜನವರಿ 29, 2025ರಂದು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿ, ಬೆಂಗಳೂರಿನ ಹೃದಯಭಾಗದಲ್ಲಿರುವ ಈ ಜಾಗವನ್ನು ತನಗೆ ಬೇಡವೆಂದು ತಿಳಿಸಿತ್ತು. ಒಡೆಯರ್ ಕುಟುಂಬವು, “ಈ ಜಾಗವು ಈಗ ರಸ್ತೆಯಾಗಿ ಬದಲಾಗಿದ್ದರಿಂದ, ಪರಿಹಾರವನ್ನು ನೀಡಲೇಬೇಕು,” ಎಂದು ವಾದಿಸಿತು. ಸುಪ್ರೀಂ ಕೋರ್ಟ್ ಈ ವಾದವನ್ನು ಒಪ್ಪಿಕೊಂಡು, ಕರ್ನಾಟಕ ಸರ್ಕಾರಕ್ಕೆ TDR ಮೂಲಕ ಪರಿಹಾರ ನೀಡುವಂತೆ ಸೂಚಿಸಿತು.

TDR ಎಂದರೇನು?

ವರ್ಗಾಯಿಸಬಲ್ಲ ಅಭಿವೃದ್ಧಿ ಹಕ್ಕುಪತ್ರ (Transferable Development Rights – TDR) ಎನ್ನುವುದು ಸರ್ಕಾರವು ವಶಪಡಿಸಿಕೊಂಡ ಜಾಗದ ಬದಲಿಗೆ ಒದಗಿಸುವ ಪರಿಹಾರದ ಪ್ರಮಾಣಪತ್ರವಾಗಿದೆ. ಈ ಪತ್ರದಲ್ಲಿ ಜಾಗದ ನಿರ್ದಿಷ್ಟ ಮೌಲ್ಯವನ್ನು ದಾಖಲಿಸಲಾಗುತ್ತದೆ. ಜಾಗದ ಮೂಲ ಮಾಲೀಕರು ಈ TDR ಪತ್ರವನ್ನು ಇತರರಿಗೆ ವರ್ಗಾಯಿಸಿ, ಹಣವನ್ನು ಪಡೆಯಬಹುದು ಅಥವಾ ಅಭಿವೃದ್ಧಿ ಯೋಜನೆಗಳಿಗೆ ಬಳಸಬಹುದು. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »