ಏರ್‌ಬಸ್‌-ಟಾಟಾ: ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್‌ ಕಾರ್ಖಾನೆಗೆ ಕೋಲಾರ ಆಯ್ಕೆ

ಯುರೋಪ್‌ನ ಅತಿದೊಡ್ಡ ವೈಮಾನಿಕ ಕಂಪನಿಯಾದ ಏರ್‌ಬಸ್‌ ಹಾಗೂ ಟಾಟಾ ಸಮೂಹದ ಏರೋಸ್ಪೇಸ್‌ ವಿಭಾಗವಾದ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ ಲಿಮಿಟೆಡ್‌ ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆಯನ್ನು ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಸ್ಥಾಪಿಸಲು ನಿರ್ಧರಿಸಿವೆ.

ಯುರೋಪ್‌ನ ಅತಿದೊಡ್ಡ ವೈಮಾನಿಕ ಕಂಪನಿಯಾದ ಏರ್‌ಬಸ್‌ ಹಾಗೂ ಟಾಟಾ ಸಮೂಹದ ಏರೋಸ್ಪೇಸ್‌ ವಿಭಾಗವಾದ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ ಲಿಮಿಟೆಡ್‌ (ಟಿಎಎಸ್‌ಎಲ್‌) ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆಯನ್ನು ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಸ್ಥಾಪಿಸಲು ನಿರ್ಧರಿಸಿವೆ. ಬೆಂಗಳೂರಿನಿಂದ ಕೇವಲ ಎರಡು ಗಂಟೆಗಳ ದೂರದಲ್ಲಿರುವ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಈ ಅತ್ಯಾಧುನಿಕ ಘಟಕವು ಶೀಘ್ರದಲ್ಲಿ ತಲೆಎತ್ತಲಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರತಿಷ್ಠಿತ ಯೋಜನೆಯನ್ನು ಪಡೆಯಲು ಆಂಧ್ರಪ್ರದೇಶ, ಉತ್ತರಪ್ರದೇಶ ಮತ್ತು ಗುಜರಾತ್‌ ರಾಜ್ಯಗಳು ಕರ್ನಾಟಕಕ್ಕೆ ತೀವ್ರ ಪೈಪೋಟಿ ನೀಡಿದ್ದವು. ಆದರೆ, ಕರ್ನಾಟಕದಲ್ಲಿ ಈಗಾಗಲೇ ವೈಮಾನಿಕ ಮತ್ತು ಏರೋಸ್ಪೇಸ್‌ ಕೈಗಾರಿಕೆಗಳಿಗೆ ಸಂಬಂಧಿಸಿದ ಕಂಪನಿಗಳ ಸಾಂದ್ರತೆ ಇರುವುದರಿಂದ, ಏರ್‌ಬಸ್‌ ಮತ್ತು ಟಾಟಾ ಕಂಪನಿಗಳು ಕೋಲಾರವನ್ನೇ ಆಯ್ಕೆ ಮಾಡಿಕೊಂಡಿವೆ.

ವಿಶ್ವದಾದ್ಯಂತ ಏರ್‌ಬಸ್‌ ಕಂಪನಿಯು ಫ್ರಾನ್ಸ್‌, ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಮಾತ್ರ ಹೆಲಿಕಾಪ್ಟರ್‌ ಜೋಡಣೆ ಘಟಕಗಳನ್ನು ಹೊಂದಿದ್ದು, ಕೋಲಾರದ ಘಟಕವು ಇದರ ನಾಲ್ಕನೇ ಘಟಕವಾಗಲಿದೆ. ಭಾರತೀಯ ವಾಯುಪಡೆಗಾಗಿ ಏರ್‌ಬಸ್‌ ಮತ್ತು ಟಿಎಎಸ್‌ಎಲ್‌ ಜಂಟಿಯಾಗಿ ಎಚ್‌125 ಹೆಲಿಕಾಪ್ಟರ್‌ಗಳ ಅಂತಿಮ ಜೋಡಣೆ ಘಟಕವನ್ನು ಕೋಲಾರದಲ್ಲಿ ಸ್ಥಾಪಿಸಲಿವೆ. ಆರಂಭಿಕ ಹಂತದಲ್ಲಿ ವಾರ್ಷಿಕ 10 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುವ ಗುರಿಯನ್ನು ಕಂಪನಿಗಳು ಹೊಂದಿವೆ. ಮುಂದಿನ ಎರಡು ದಶಕಗಳಲ್ಲಿ ಭಾರತ ಮತ್ತು ದಕ್ಷಿಣ ಏಷ್ಯಾದಲ್ಲಿ 500 ಲಘು ಹೆಲಿಕಾಪ್ಟರ್‌ಗಳಿಗೆ ಬೇಡಿಕೆ ಇರಬಹುದು ಎಂದು ಏರ್‌ಬಸ್‌ ಅಂದಾಜಿಸಿದೆ.

ಈ ಯೋಜನೆಯಿಂದ ಕೋಲಾರ ಜಿಲ್ಲೆಯ ಆರ್ಥಿಕತೆಗೆ ಗಣನೀಯ ಉತ್ತೇಜನ ಸಿಗಲಿದ್ದು, ಸ್ಥಳೀಯ ಉದ್ಯೋಗ ಸೃಷ್ಟಿಗೂ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಲಿದೆ. ಕರ್ನಾಟಕವು ಏರೋಸ್ಪೇಸ್‌ ಕ್ಷೇತ್ರದಲ್ಲಿ ಭಾರತದ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಬಲಗೊಳ್ಳಲಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »