ಬೆಳಗಾವಿಯಲ್ಲಿ ಕೊರೊನಾಗೆ ಮೊದಲ ಬಲಿ: ರಾಜ್ಯದಲ್ಲಿ ಕೋವಿಡ್‌ನಿಂದ ಎರಡನೇ ಮರಣ

ಬೆಳಗಾವಿಯಲ್ಲಿ 70 ವರ್ಷದ ವೃದ್ಧರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ.

ಬೆಳಗಾವಿ : ಕೊರೊನಾ ವೈರಸ್ ಮಹಾಮಾರಿಯು ಬೆಳಗಾವಿಯಲ್ಲಿ ತನ್ನ ಮೊದಲ ಬಲಿಯನ್ನು ಪಡೆದಿದೆ, ಇದರೊಂದಿಗೆ ಕರ್ನಾಟಕದಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ. ಬೆಳಗಾವಿ ತಾಲೂಕಿನ 70 ವರ್ಷ ವಯಸ್ಸಿನ ವೃದ್ಧರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ರೋಗಿಯು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕೊರೊನಾ ಸೋಂಕಿನಿಂದ ಆರೋಗ್ಯ ಇನ್ನಷ್ಟು ಕ್ಷೀಣಿಸಿತು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಮೇ 28, 2025ರಂದು ಸೋಂಕು ದೃಢಪಟ್ಟಿತ್ತು. ತಕ್ಷಣವೇ ರೋಗಿಯನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (BIMS) ಆಸ್ಪತ್ರೆಯ ಕೋವಿಡ್ ವಾರ್ಡ್‌ಗೆ ಸ್ಥಳಾಂತರಿಸಿ ಚಿಕಿತ್ಸೆ ಆರಂಭಿಸಲಾಯಿತು. ಆದರೆ, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ರೋಗಿ ಮೃತಪಟ್ಟಿದ್ದಾರೆ.

ರೋಗಿಯು ಈಗಾಗಲೇ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಾದ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕೊರೊನಾ ಸೋಂಕು ದೃಢಪಟ್ಟ ಕೂಡಲೇ, ರೋಗಿಯನ್ನು ಕೋವಿಡ್-19ಗೆ ನಿಗದಿತ ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಆದರೆ, ವಯಸ್ಸಿನ ಕಾರಣ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದಾಗಿ ರೋಗಿಯ ಸ್ಥಿತಿ ಗಂಭೀರವಾಯಿತು. ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಯಿತಾದರೂ, ರೋಗಿಯ ಆರೋಗ್ಯ ಸುಧಾರಿಸಲಿಲ್ಲ. ಕೊನೆಗೆ, ಮೇ 28ರ ರಾತ್ರಿ ರೋಗಿ ಕೊನೆಯುಸಿರೆಳೆದರು. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕುಟುಂಬಸ್ಥರು ರಾತ್ರಿಯೇ ಅಂತ್ಯಸಂಸ್ಕಾರವನ್ನು ಪೂರ್ಣಗೊಳಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊವಿಡ್-19 ಸೋಂಕು ಕಂಡುಬಂದಿದ್ದು, ರಾಜ್ಯದಲ್ಲಿ ಮತ್ತೆ ತನ್ನ ಅಧಿಪತ್ಯ ಸಾಧಿಸುತ್ತಿದೆ. ನಿನ್ನೆ ಬೆಳಗ್ಗೆವರೆಗೂ ಒಟ್ಟು 100 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿತ್ತು. ಸಂಜೆಯೊಳಗೆ ಮತ್ತಷ್ಟು ಪ್ರಕರಣಗಳು ಪತ್ತೆಯಾಗಿವೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »