ನನ್ನ ಕಥೆಗಳು ಭಾಷೆಯ ಗಡಿ ಮೀರಿ ಜಗತ್ತಿಗೆ ತಲುಪಬೇಕು- ಬಾನು ಮುಷ್ತಾಕ್‌

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ, ಮತ್ತು ಗಾಂಧಿ ಪ್ರತಿಷ್ಠಾನ ಜಂಟಿಯಾಗಿ ಬುಧವಾರ ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ಕಾಕ್ ಅವರಿಗೆ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕನ್ನಡ ಸಾಹಿತ್ಯದ ಗರಿಮೆಯನ್ನು ಜಗತ್ತಿನ ಮುಂದೆ ತೆರೆದಿಟ್ಟಿರುವ ಹಾಸನದ ಲೇಖಕಿ ಬಾನು ಮುಷ್ತಾಕ್‌ರ ಕಥಾಸಂಕಲನ ‘ಹಾರ್ಟ್ ಲ್ಯಾಂಪ್’ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನವಾಗಿದೆ. ದೀಪಾ ಭಾಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ ಈ ಕೃತಿಯ 12 ಸಣ್ಣ ಕಥೆಗಳು, ಮಾನವೀಯತೆಯ, ಸೌಹಾರ್ದತೆಯ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜಗತ್ತಿನ 35 ಭಾಷೆಗಳಿಗೆ ಮತ್ತು 12 ಭಾರತೀಯ ಭಾಷೆಗಳಿಗೆ ಒಯ್ಯಲಿವೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು ಗಾಂಧಿ ಪ್ರತಿಷ್ಠಾನದಿಂದ ಬೆಂಗಳೂರಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಲಾಯಿತು.

ಬಾನು ಮುಷ್ತಾಕ್, ಕನ್ನಡದ ನವ್ಯೋತ್ತರ ಲೇಖಕಿಯಾಗಿ, ಪತ್ರಕರ್ತೆಯಾಗಿ, ವಕೀಲೆಯಾಗಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿ ಬಹುಮುಖಿಯಾಗಿ ಕಾರ್ಯನಿರ್ವಹಿಸಿದ್ದಾರೆ. 1948ರ ಏಪ್ರಿಲ್ 3ರಂದು ಹಾಸನದ ವಲಭಬಾಯಿಯಲ್ಲಿ ಜನಿಸಿದ ಬಾನು, ಬಾಲ್ಯದಲ್ಲಿ ಕನ್ನಡ ಶಿಕ್ಷಣದ ಸವಾಲನ್ನು ಎದುರಿಸಿದರು. ಶಿವಮೊಗ್ಗದ ಮಿಷನರಿ ಶಾಲೆಯಲ್ಲಿ, ಆರು ತಿಂಗಳಲ್ಲಿ ಕನ್ನಡ ಕಲಿಯುವ ಷರತ್ತಿನ ಮೇಲೆ ಪ್ರವೇಶ ಪಡೆದ ಅವರು, ಕೆಲವೇ ದಿನಗಳಲ್ಲಿ ಬರವಣಿಗೆ ಆರಂಭಿಸಿದರು. ಈ ದಿಟ್ಟತನವೇ ಇಂದು ಕನ್ನಡ ಸಾಹಿತ್ಯವನ್ನು ಜಗತ್ತಿನ ವೇದಿಕೆಗೆ ಕೊಂಡೊಯ್ದಿದೆ.

‘ಹಾರ್ಟ್ ಲ್ಯಾಂಪ್’ ಕೃತಿಯು 1990 ರಿಂದ 2023ರವರೆಗೆ ಬಾನು ಬರೆದ 50 ಕಥೆಗಳಿಂದ ಆಯ್ದ 12 ಕಥೆಗಳ ಸಂಕಲನವಾಗಿದೆ. ಮೈಸೂರಿನ ಅಭಿರುಚಿ ಪ್ರಕಾಶನವು ಈ ಕಥೆಗಳನ್ನು ‘ಹಸೀನಾ ಮತ್ತು ಇತರ ಕಥೆಗಳು’ ಎಂಬ ಹೆಸರಿನಲ್ಲಿ ಪ್ರಕಟಿಸಿತು, ಇದನ್ನು ದೀಪಾ ಭಾಸ್ತಿ ಇಂಗ್ಲಿಷ್‌ಗೆ ಭಾಷಾಂತರಿಸಿದರು. ಈ ಕೃತಿಯು ಧಾರ್ಮಿಕ ದ್ವಂದ್ವಗಳು, ಮಹಿಳೆಯರ ಮೇಲಿನ ದೌರ್ಜನ್ಯ, ಸಾಮಾಜಿಕ ಅಸಮಾನತೆ ಮತ್ತು ಮಾನವೀಯತೆಯ ಹೋರಾಟವನ್ನು ಚಿತ್ರಿಸುತ್ತದೆ. ಬಾನು ಅವರ ಕಥೆ ‘ಕರಿನಾಗರಗಳು’ ಗಿರೀಶ್ ಕಾಸರವಳ್ಳಿಯವರ ‘ಹಸೀನಾ’ ಚಿತ್ರಕ್ಕೆ ಸ್ಫೂರ್ತಿಯಾಗಿ, ರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು, “ಪ್ರಶಸ್ತಿಗಿಂತ, ನನ್ನ ಕಥೆಗಳು ಭಾಷೆಯ ಗಡಿಯನ್ನು ಮೀರಿ ಓದುಗರನ್ನು ಮುಟ್ಟಬೇಕೆಂಬುದು ನನ್ನ ಕನಸಾಗಿತ್ತು. ಇಂಗ್ಲಿಷ್ ಅನುವಾದದಿಂದ ಇದು ಸಾಧ್ಯವಾಯಿತು,” ಎಂದರು. ಪ್ರಕಾಶಕರಿಗೆ ₹6 ಕೋಟಿ ವ್ಯವಹಾರವಾಗಿದ್ದು, ಈ ಕೃತಿಯ ಆಡಿಯೋ ಮತ್ತು ಸಿನಿಮಾ ಹಕ್ಕುಗಳು ಮಾರಾಟವಾಗಿವೆ. ಕರ್ನಾಟಕದ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, “ಬಾನು ಅವರ ಕೃತಿಯು ಮತಾಂಧತೆಗೆ ಕೊಟ್ಟ ಏಟು ಮತ್ತು ಮಾನವೀಯತೆಯ ಗೆಲುವು,” ಎಂದು ಬಣ್ಣಿಸಿದರು.

ಪತ್ರಕರ್ತ ಜಿ.ಎನ್. ಮೋಹನ್, ಬಾನು ಅವರ ಬಾಲ್ಯದ ಸವಾಲುಗಳನ್ನು ಸ್ಮರಿಸಿದರು. “ಅವರ ತಂದೆ ಕನ್ನಡ ಶಾಲೆಗೆ ಸೇರಿಸಿದಾಗ, ಶಿಕ್ಷಕರು ಉರ್ದು ಶಾಲೆಗೆ ಏಕೆ ಕಳುಹಿಸಲಿಲ್ಲ ಎಂದು ಪ್ರಶ್ನಿಸಿದ್ದರು. ಆದರೆ, ಬಾನು ಆರು ತಿಂಗಳಲ್ಲಿ ಕನ್ನಡ ಕಲಿತು, ಇಂದು ಜಗತ್ತಿನಾದ್ಯಂತ ಕನ್ನಡದ ಕೀರ್ತಿಯನ್ನು ಹೊರಹೊಮ್ಮಿಸಿದ್ದಾರೆ,” ಎಂದರು. ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ, ಗಾಂಧಿ ಭವನದ ಎಚ್.ಸಿ. ದಿನೇಶ್ ಉಪಸ್ಥಿತರಿದ್ದರು.

ಬಾನು ಅವರ ಸಾಹಿತ್ಯವು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದ್ದು, ಇದು ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆಗೆ ದಾರಿದೀಪವಾಗಿದೆ

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »