ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ ವಾಷಿಂಗ್ಟನ್ ಭೇಟಿ

250ನೇ ಅಮೆರಿಕ ಸೇನಾದಿನಾಚರಣೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ (COAS) ಜನರಲ್ ಸೈಯದ್ ಅಸಿಮ್ ಮುನೀರ್ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡಲಿದ್ದಾರೆ.

ವಾಷಿಂಗ್ಟನ್: 250ನೇ ಅಮೆರಿಕ ಸೇನಾದಿನಾಚರಣೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ (COAS) ಜನರಲ್ ಸೈಯದ್ ಅಸಿಮ್ ಮುನೀರ್ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. 

ಪಾಕಿಸ್ತಾನವು ಭಾರತದ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್‌ನಲ್ಲಿ ಸೋಲನುಭವಿಸಿತು . ಈ ಸೋಲಿನ ನಂತರ ಅಸಿಮ್ ಮುನೀರ್‌ರ ಅಮೆರಿಕ ಭೇಟಿಯು ರಾಜಕೀಯ ಮತ್ತು ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ್ದಾಗಿದೆ. ಈ ಭೇಟಿಯಲ್ಲಿ ಅಮೆರಿಕದೊಂದಿಗಿನ ಸೇನಾ ಸಹಕಾರ, ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆ, ಮತ್ತು ಚೀನಾದೊಂದಿಗಿನ ಪಾಕಿಸ್ತಾನದ ಸಂಬಂಧಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಇನ್ನುಅಮೆರಿಕವು ಈ ಉನ್ನತ ಮಟ್ಟದ ಸೇನಾ ಕಾರ್ಯಕ್ರಮವನ್ನು ಪಾಕಿಸ್ತಾನದ ಮೇಲೆ ಒತ್ತಡ ಹೇರಲು ಬಳಸಿಕೊಳ್ಳಬಹುದು. ವಿಶೇಷವಾಗಿ, ಭಾರತ ಮತ್ತು ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸುವ ಗುಂಪುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಮೆರಿಕ ಒತ್ತಾಯಿಸಬಹುದು. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಚರ್ಚೆಯಲ್ಲಿ ಈ ವಿಷಯ ಪ್ರಮುಖವಾಗಿರಲಿದೆ ಎಂದು ತಿಳಿದುಬಂದಿದೆ.

ಈ ಆಹ್ವಾನಕ್ಕೆ ಪಾಕಿಸ್ತಾನದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸೇನಾ ಮುಖ್ಯಸ್ಥರ ಈ ಭೇಟಿಯ ವಿರುದ್ಧ ಪ್ರತಿಭಟನೆಗೆ ಯೋಜನೆ ಸಿದ್ಧಪಡಿಸುತ್ತಿದೆ. ಇದು ದೇಶದ ಒಳಗಿನ ರಾಜಕೀಯ ಉದ್ವಿಗ್ನತೆಯನ್ನು ತೋರಿಸುತ್ತದೆ. ಅಲ್ಲದೆ, ಇಮ್ರಾನ್ ಖಾನ್ ಅವರ ಬೆಂಬಲಿಗರಿಂದ ಈ ಭೇಟಿಯನ್ನು ಟೀಕಿಸಲಾಗುತ್ತಿದೆ.
ಪಾಕಿಸ್ತಾನದ ಚೀನಾದೊಂದಿಗಿನ ನಿಕಟ ಸಂಬಂಧವು ಭಾರತ ಮತ್ತು ಅಮೆರಿಕಕ್ಕೆ ಕಳವಳಕ್ಕೆ ಕಾರಣವಾಗಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಮತ್ತು ಸೇನಾ ಸಹಕಾರವು ದಕ್ಷಿಣ ಏಷ್ಯಾದ ಶಕ್ತಿಯ ಸಮತೋಲನದ ಮೇಲೆ ಪರಿಣಾಮ ಬೀರಿದೆ. ಅಮೆರಿಕವು ಈ ಭೇಟಿಯ ಮೂಲಕ ಪಾಕಿಸ್ತಾನವನ್ನು ಚೀನಾದಿಂದ ದೂರವಿಡಲು ಪ್ರಯತ್ನಿಸಬಹುದು. ಭಾರತವು ಈ ಭೇಟಿಯನ್ನು ಗಮನಿಸುತ್ತಿದ್ದು, ಅಮೆರಿಕ-ಪಾಕಿಸ್ತಾನ ಸಂಬಂಧದ ಬೆಳವಣಿಗೆಯ ಬಗ್ಗೆ ತನ್ನ ಕಾರ್ಯತಂತ್ರವನ್ನು ರೂಪಿಸಬಹುದು. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »