ಇಸ್ರೇಲ್‌-ಇರಾನ್‌ ಸಂಘರ್ಷ| ಅತ್ತ ಟ್ರಂಪ್‌ ಯುದ್ಧ ವಿರಾಮ ಘೋಷಣೆ, ಇತ್ತ ಇರಾನ್‌ನಿಂದ ಇಸ್ರೇಲ್‌ ಮೇಲೆ ದಾಳಿ!

Isreal-Iran conflict missile attack
Isreal-Iran conflict missile attack

ಸೋಮವಾರ ಇಸ್ರೇಲ್‌ ಮತ್ತು ಇರಾನ್‌ ನಡುವೆ ಯುದ್ಧ ವಿರಾಮ ಘೋಷಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆನ್ನಲ್ಲೇ ಇರಾನ್‌ ಇಸ್ರೇಲ್‌ ಮೇಲೆ ದಾಳಿ ಮಾಡಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇಸ್ರೇಲ್‌ನ ಅಧಿಕೃತ ಹೇಳಿಕೆ ಈ ಮಾಹಿತಿ ಹೊರಹಾಕಿದ್ದು, ನ್ಯೂಸ್‌ನೆಟ್‌ವರ್ಕ್‌ ಈ ಕುರಿತು ವರದಿ ಮಾಡಿದೆ.

ರಾಷ್ಟ್ರೀಯ ತುರ್ತು ವೈದ್ಯಕೀಯ ಸೇವೆ ಮಗೇನ್‌ ಡೇವಿಡ್‌ ಅಡಾಮ್‌, ಇರಾನ್‌ ದಾಳಿಯಲ್ಲಿ ಮೂವರು ಮೃತಪಟ್ಟಿರುವುದಾಗಿ ತಿಳಿಸಿದೆ ಎಂದು ವರದಿ ಹೇಳುತ್ತಿದೆ.

ಈ ದಾಳಿಗೂ ಕೆಲವೇ ಗಂಟೆಗಳ ಮುನ್ನ ಡೊನಾಲ್ಡ್‌ ಟ್ರಂಪ್‌ ಇಸ್ರೇಲ್ ಮತ್ತು ಇರಾನ್‌ ನಡುವೆ ಸಂಪೂರ್ಣ ಯುದ್ಧವಿರಾಮ ಘೋಷಿಸಲಾಗಿದೆ ಎಂದೂ, ಎರಡೂ ರಾಷ್ಟ್ರಗಳ ಒಪ್ಪಿವೆ ಎಂದು ಹೇಳಿಕೆ ನೀಡಿದ್ದರು.

ಬೆನ್ನಲ್ಲೇ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡ ಅಮೆರಿಕದ ಅಧ್ಯಕ್ಷರ ಹೇಳಿಕೆಯನ್ನು ಒಪ್ಪಿರುವುದಾಗಿ ಹೇಳಿದ್ದರು. ಇರಾನ್‌ ಈ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿರಲಿಲ್ಲ.

ಇಸ್ರೇಲ್ ಮತ್ತು ಇರಾನ್‌ ನಡುವೆ ಆರಂಭವಾದ 12 ದಿನಗಳ ಯುದ್ಧದಲ್ಲಿ ಇರಾನ್‌ನಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದರು, ಅಪಾರ ಹಾನಿಉಂಟಾಗಿತ್ತು. ಇತ್ತ ಇಸ್ರೇಲ್‌ನಲ್ಲೂ ಹತ್ತಾರು ಜನರು ಜೀವ ಕಳೆದುಕೊಂಡಿದ್ದರು. ಅಪಾರ ಆಸ್ತಿಗೆ ಹಾನಿ ಉಂಟಾಗಿತ್ತು.

ಕಳೆದ ವಾರ ಇರಾನಿನ ಮೂರು ಪರಮಾಣು ಸ್ಥಾವರಗಳ ಮೇಲೆ ಅಮೆರಿಕದ ದಾಳಿ ನಡೆಸಿತ್ತು. ಈಗ ಎರಡೂ ರಾಷ್ಟ್ರಗಳು ಯುದ್ಧವಿರಾಮ ಘೋಷಿಸಲು ಒಪ್ಪಿವೆ ಎಂಬ ಹೇಳಿಕೆ ನೀಡಿದ್ದರು.

ಟ್ರಂಪ್‌ ಶಾಂತಿ ಘೋಷಣೆ; ಇರಾನ್‌ ನಿರಾಕರಣೆ

ಭಾರತ- ಪಾಕಿಸ್ತಾನ ಯುದ್ಧ ಸಂದರ್ಭದಲ್ಲಿ ಸ್ವಯಂ ಪ್ರೇರಿತವಾಗಿ ಮಧ್ಯಸ್ಥಿಕೆ ವಹಿಸಿ ಶಾಂತಿ ಘೋಷಿಸಿದ್ದು ಈಗ ಇರಾನ್‌ ಯಾವುದೇ ಶಾಂತಿ ಒಪ್ಪಂದವಾಗಿಲ್ಲ ಎಂದು ಹೇಳಿಕೆ ನೀಡಿದೆ.

ಇರಾನಿನ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್‌ ಅರಾಘಾಚಿ, ಇರಾನ್‌ ಸತತವಾಗಿ ಸ್ಪಷ್ಟಪಡಿಸಿದೆ, ಇಶ್ರೇಲ್‌ ಯುದ್ಧ ಘೋಷಿಸಿತೆ ವಿನಾಃ ಇರಾನ್‌ ಅಲ್ಲ.ಲ ಇಲ್ಲಿಯವರೆಗೆ ಯುದ್ಧವಿರಾಮ ಅಥವಾ ಸೇನಾ ಕಾರ್ಯಾಚರಣೆ ನಿಲ್ಲಿಸಲು ಯಾವುದೇ ಒಪ್ಪಂದವಾಗಿಲ್ಲ.” ಎಂದು ತಮ್ಮ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಭಾರತ-ಪಾಕಿಸ್ತಾನ ಸಂಘರ್ಷ ಸಂದರ್ಭದಲ್ಲಿ ಟ್ರಂಪ್‌ ಸ್ವತಃ ಎರಡೂ ರಾಷ್ಟ್ರಗಳೊಂದಿಗೆ ಮಾತನಾಡಿ, ಯುದ್ಧವಿರಾಮಕ್ಕೆ ಒಪ್ಪಿಸಿದ್ದಾಗಿ ಟ್ರಂಪ್‌ ಹೇಳಿಕೆ ನೀಡಿದ್ದರು. ಈಗ ಇಸ್ರೇಲ್-ಇರಾನ್‌ ಸಂಘರ್ಷದ ಸಂದರ್ಭದಲ್ಲೂ ಹೇಳಿಕೆ ನೀಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »