ವಾಲ್ಮೀಕಿ ನಿಗಮ ಹಗರಣ: ಮೂರು ತಂಡಗಳಿಂದ ನ್ಯಾಯಾಂಗ ತನಿಖೆ

ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸಂಭವಿಸಿದ ₹89.62 ಕೋಟಿ ಹಗರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
Karnataka’s Valmiki Scam

ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸಂಭವಿಸಿದ ₹89.62 ಕೋಟಿ ಹಗರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 2024ರ ಮೇ 26ರಂದು ನಿಗಮದ ಅಧೀಕ್ಷಕ ಚಂದ್ರಶೇಖರನ್ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅವರು ಬರೆದ  ಮರಣ ಪತ್ರದಲ್ಲಿ, “ಮೇಲಿನವರ ಆದೇಶದಂತೆ ನಿಗಮದ ಹಣವನ್ನು ಬೇರೆ-ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ” ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ, ನಿಗಮದ ಆಂತರಿಕ ತಪಾಸಣೆಯಲ್ಲಿ ₹89.62 ಕೋಟಿ ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತು.

2024ರ ಮೇ 28-29ರಂದು, ನಿಗಮದ ಪ್ರಧಾನ ವ್ಯವಸ್ಥಾಪಕ ಎ. ರಾಜಶೇಖರನ್, ಯೂನಿಯನ್ ಬ್ಯಾಂಕ್‌ನ ಅಧಿಕಾರಿಗಳು ಹಣವನ್ನು ದುರ್ಬಳಕೆ ಮಾಡಿದ್ದಾರೆಂದು ಹೈಗೌಂಡ್ ಪೊಲೀಸರಿಗೆ ದೂರು ನೀಡಿದರು. ಮೇ 31ರಂದು ರಾಜ್ಯ ಸರ್ಕಾರವು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಎಡಿಜಿಪಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿತು. ಜೂನ್ 1ರಿಂದ 24ರವರೆಗೆ, ಎಸ್‌ಐಟಿಯು ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಜಿ. ದುರುಗಣ್ಣವರ್, ಸತ್ಯನಾರಾಯಣ ವರ್ಮಾ, ಚಂದ್ರಮೋಹನ್ ಮತ್ತು ಸಾಯಿತೇಜ್ ಸೇರಿದಂತೆ 12 ಮಂದಿಯನ್ನು ಬಂಧಿಸಿತು. ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಯಿತು.

ಜೂನ್ 29ರ ವೇಳೆಗೆ, ₹94.5 ಕೋಟಿಯಲ್ಲಿ ₹28 ಕೋಟಿಯನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಯಿತು. ₹45 ಕೋಟಿ ಠೇವಣಿ ಮತ್ತು ₹4 ಕೋಟಿ ಮೌಲ್ಯದ ಐಷಾರಾಮಿ ಕಾರುಗಳನ್ನು ಮುಟ್ಟುಗೋಲು ಹಾಕಲಾಯಿತು. ಆಗಸ್ಟ್ 5ರಂದು, ಎಸ್‌ಐಟಿಯು ಆರೋಪ ಪಟ್ಟಿಯನ್ನು ಸಲ್ಲಿಸಿತು, ಇದರಲ್ಲಿ ನಿಗಮದ ಅಧಿಕಾರಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ತಿಳಿಸಿತು.

ಸಿಬಿಐ ಮತ್ತು ಇ.ಡಿ ತನಿಖೆ

2024ರ ಜೂನ್ 6ರಿಂದ 2025ರ ಜುಲೈ 1ರವರೆಗೆ, ಯೂನಿಯನ್ ಬ್ಯಾಂಕ್‌ನ ಕೇಂದ್ರ ಕಚೇರಿಯು ₹89.62 ಕೋಟಿ ಅಕ್ರಮ ವರ್ಗಾವಣೆಯ ಬಗ್ಗೆ ಸಿಬಿಐಗೆ ದೂರು ನೀಡಿತು. ಸಿಬಿಐ ಎಫ್‌ಐಆರ್ ದಾಖಲಿಸಿ, ಆರ್‌ಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಮಾಹಿತಿ ಒದಗಿಸಿತು. ಜುಲೈ 10ರಂದು, ಇ.ಡಿಯು ರಾಜ್ಯದ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತು, ಬಿ. ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಆಪ್ತರನ್ನು ವಿಚಾರಣೆಗೆ ಒಳಪಡಿಸಿತು. ಜುಲೈ 12ರಂದು, ಇ.ಡಿಯು ಬಿ. ನಾಗೇಂದ್ರರನ್ನು ಬಂಧಿಸಿತು. ತನಿಖೆಯಲ್ಲಿ, ₹20 ಕೋಟಿಯನ್ನು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಬಳಸಲಾಗಿದೆ ಎಂದು ಬಹಿರಂಗವಾಯಿತು.

ಸೆಪ್ಟೆಂಬರ್ 9ರಂದು, ಇ.ಡಿಯು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿತು. ಶಾಸಕ ಬಿ. ನಾಗೇಂದ್ರರೇ ಈ ಹಗರಣದ ಮುಖ್ಯ ಆರೋಪಿಯೆಂದು ಆರೋಪಿಸಲಾಯಿತು. ಅಕ್ಟೋಬರ್ 9ರಂದು, ಹೈದರಾಬಾದ್‌ನ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಅಕ್ಟೋಬರ್ 15ರಂದು, ₹14.80 ಕೋಟಿಯನ್ನು ಬಳ್ಳಾರಿಯ 7 ಲಕ್ಷಕ್ಕೂ ಹೆಚ್ಚು ಮತದಾರರಿಗೆ ಹಂಚಲಾಗಿದೆ ಎಂದು ಮಾಹಿತಿ ನೀಡಲಾಯಿತು.

2024ರ ಜೂನ್ 6ರಂದು, ವಿರೋಧ ಪಕ್ಷಗಳ ಟೀಕೆಯ ನಡುವೆ ಬಿ. ನಾಗೇಂದ್ರರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಜುಲೈ 12ರಂದು ಇ.ಡಿಯಿಂದ ಬಂಧನಕ್ಕೊಳಗಾದ ಅವರು, ಅಕ್ಟೋಬರ್ 14ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾದರು.

2025ರ ಜೂನ್ 11ರಂದು, ಕಾಂಗ್ರೆಸ್ ಸಂಸದ ಇ. ತುಕಾರಾಂ, ಶಾಸಕರಾದ ಬಿ. ನಾಗೇಂದ್ರ, ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್, ಮತ್ತು ಎನ್‌.ಟಿ. ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಎಲ್ಲಾ ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿತು. ಈ ಹಗರಣದ ತನಿಖೆ ರಾಜ್ಯ ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಮುಂದುವರಿಯುತ್ತಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »