ಅನ್ನಭಾಗ್ಯ ಯೋಜನೆಗೆ ₹244.10 ಕೋಟಿ ಬಿಡುಗಡೆ: ಲಾರಿ ಮುಷ್ಕರ ವಾಪಸ್ 

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ಸಾಗಣೆ ವೆಚ್ಚ, ಸಗಟು ಮತ್ತು ಚಿಲ್ಲರೆ ಲಾಭಾಂಶಕ್ಕಾಗಿ ₹244.10 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.
244.10 Crore Released for Anna Bhagya: Lorry Strike Ends,
ಚಿತ್ರಕೃಪೆ : ಡೆಕನ್‌ ಹೆರಾಲ್ಡ್‌

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ಸಾಗಣೆ ವೆಚ್ಚ, ಸಗಟು ಮತ್ತು ಚಿಲ್ಲರೆ ಲಾಭಾಂಶಕ್ಕಾಗಿ ₹244.10 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಕ್ರಮದ ಬೆನ್ನಲ್ಲೇ, ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಗುತ್ತಿಗೆದಾರರ ಸಂಘವು ತಮ್ಮ ಮುಷ್ಕರವನ್ನು ವಾಪಸ್ ಪಡೆದಿದ್ದು, ರಾಜ್ಯಾದ್ಯಂತ ಆಹಾರ ಧಾನ್ಯ ಸಾಗಣೆಗೆ ಬಳಸುವ ಲಾರಿಗಳು ಮತ್ತೆ ರಸ್ತೆಗಿಳಿದಿವೆ.

ಅನ್ನಭಾಗ್ಯ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ (ಎನ್‌ಎಫ್‌ಎಸ್‌ಎ) ಯೋಜನೆಗಳಡಿ ಆಹಾರ ಧಾನ್ಯ ಸಾಗಣೆಗೆ ಸಂಬಂಧಿಸಿದ ಬಿಲ್‌ಗಳನ್ನು ಫೆಬ್ರವರಿಯಿಂದ ಜೂನ್‌ವರೆಗೆ ಪಾವತಿಸದಿರುವುದನ್ನು ಖಂಡಿಸಿ, ಲಾರಿ ಮಾಲೀಕರು ಜುಲೈ 7ರಿಂದ ರಾಜ್ಯವ್ಯಾಪಿ ಮುಷ್ಕರ ಆರಂಭಿಸಿದ್ದರು. ಇದರಿಂದಾಗಿ, ಪಡಿತರ ಚೀಟಿ ಹೊಂದಿರುವ 4.42 ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಇದನ್ನೂ ಓದಿ | ಅನ್ನಭಾಗ್ಯಕ್ಕೆ ಅಡ್ಡಿ: 4,500 ಲಾರಿ ಮಾಲಕರ ಮುಷ್ಕರ, ಸರಕಾರದ ವಿರುದ್ಧ ಆಕ್ರೋಶ

ಗುತ್ತಿಗೆದಾರರ ಸಂಘದ ಒತ್ತಾಯಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ, ಫೆಬ್ರವರಿಯಿಂದ ಮೇ 2025ರವರೆಗಿನ ಸಾಗಾಣಿಕೆ, ಸಗಟು ಮತ್ತು ಚಿಲ್ಲರೆ ಲಾಭಾಂಶ ವೆಚ್ಚಕ್ಕಾಗಿ ₹244.10 ಕೋಟಿಯನ್ನು ಬಿಡುಗಡೆ ಮಾಡಿತು. ಈ ಅನುದಾನವನ್ನು ಖಜಾನೆ-2 ತಂತ್ರಾಂಶದ ಮೂಲಕ ಬೆಂಗಳೂರು ನಗರ ಜಿಲ್ಲಾ ಪಂಚಾಯತ್‌ನ ಮುಖ್ಯ ಲೆಕ್ಕಾಧಿಕಾರಿಗೆ ವರ್ಗಾಯಿಸಲಾಗಿದೆ. ಜಿಲ್ಲಾಧಿಕಾರಿಗಳ ಮೂಲಕ ಈ ಹಣವನ್ನು ಗುತ್ತಿಗೆದಾರರಿಗೆ ವಿತರಿಸಲಾಗುತ್ತಿದೆ. ಉಳಿದ ಬಾಕಿ ಹಣವನ್ನು 48 ಗಂಟೆಗಳ ಒಳಗೆ ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ನೀಡಿದೆ.

ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ, “ಸರ್ಕಾರ ನಮ್ಮ ಬೇಡಿಕೆಗೆ ಕಿವಿಗೊಟ್ಟು ₹244.10 ಕೋಟಿ ಬಿಡುಗಡೆ ಮಾಡಿದೆ. ಈ ಆದೇಶದಿಂದ ಲಾರಿಗಳು ಡಿಪೋಗಳಿಗೆ ತೆರಳಿ ಲೋಡಿಂಗ್ ಕಾರ್ಯ ಆರಂಭಿಸಿವೆ. ಮುಷ್ಕರ ನಡೆಸುವುದು ನಮ್ಮ ಉದ್ದೇಶವಲ್ಲ, ಆದರೆ ಆರ್ಥಿಕ ಸಂಕಷ್ಟದಿಂದ ಈ ಕ್ರಮ ಕೈಗೊಳ್ಳಬೇಕಾಯಿತು,” ಎಂದು ಪ್ರಜಾವಾಣಿಗೆ ತಿಳಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »