ವಡೋದರಾದಲ್ಲಿ ʻಗಂಭೀರಾ ಸೇತುವೆʼ ಕುಸಿತ: ಮಹಿಸಾಗರ್ ನದಿಗೆ ವಾಹನಗಳು ಬಿದ್ದು, ಸಾವು-ನೋವು

ಗುಜರಾತ್‌ನ ವಡೋದರಾ ಜಿಲ್ಲೆಯ ಮಹಿಸಾಗರ್ ನದಿಯ ಮೇಲಿರುವ ಗಂಭೀರಾ ಸೇತುವೆ ಜುಲೈ 9, 2025 ರ ಬುಧವಾರ ಬೆಳಿಗ್ಗೆ ಕುಸಿದು, ಭಾರೀ ದುರಂತಕ್ಕೆ ಕಾರಣವಾಗಿದೆ.
Gambhira Bridge Collapse: Vehicles Plunge into Mahisagar Lives Lost

ಗುಜರಾತ್‌ನ ವಡೋದರಾ ಜಿಲ್ಲೆಯ ಮಹಿಸಾಗರ್ ನದಿಯ ಮೇಲಿರುವ ಗಂಭೀರಾ ಸೇತುವೆ ಜುಲೈ 9, 2025 ರ ಬುಧವಾರ ಬೆಳಿಗ್ಗೆ ಕುಸಿದು, ಭಾರೀ ದುರಂತಕ್ಕೆ ಕಾರಣವಾಗಿದೆ. ಈ ಘಟನೆಯಲ್ಲಿ ಹಲವಾರು ವಾಹನಗಳು ನದಿಗೆ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐದು ಜನ ಗಾಯಗೊಂಡಿದ್ದಾರೆ. ಸೇತುವೆ ಕುಸಿತದಿಂದಾಗಿ ಆನಂದ್ ಮತ್ತು ವಡೋದರಾ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿದ್ದು, ಮಧ್ಯ ಗುಜರಾತ್‌ನಿಂದ ಸೌರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಗಂಭೀರಾ ಸೇತುವೆ, 1985 ರಲ್ಲಿ ನಿರ್ಮಿತವಾದ 45 ವರ್ಷ ಹಳೆಯ ಸೇತುವೆಯಾಗಿದ್ದು, ವಡೋದರಾ ಜಿಲ್ಲೆಯ ಪದ್ರಾ ತಾಲೂಕಿನ ಮುಜ್ಪುರ್‌ನಲ್ಲಿ ಮಹಿಸಾಗರ್ ನದಿಯ ಮೇಲೆ ಇದೆ. ಈ ಸೇತುವೆ ಬೆಳಿಗ್ಗೆ 7:30 ರ ಸುಮಾರಿಗೆ ಯಾವುದೇ ಮುನ್ಸೂಚನೆ ಇಲ್ಲದೆ ಕುಸಿಯಿತು. ಈ ಸಂದರ್ಭದಲ್ಲಿ ಸೇತುವೆಯ ಮೇಲೆ ಎರಡು ಟ್ರಕ್‌ಗಳು, ಒಂದು ಬೊಲೆರೊ ಜೀಪ್, ಒಂದು ಪಿಕ್‌ಅಪ್ ವ್ಯಾನ್ ಮತ್ತು ಒಂದು ಆಟೋ-ರಿಕ್ಷಾ ಸೇರಿದಂತೆ ಕನಿಷ್ಠ ಐದು ವಾಹನಗಳು ಸಂಚರಿಸುತ್ತಿದ್ದವು. ಕುಸಿತದಿಂದ ಈ ವಾಹನಗಳು ನದಿಗೆ ಬಿದ್ದವು, ಇದರಿಂದ ಭಾರೀ ಜೀವಹಾನಿ ಮತ್ತು ಗಾಯಗಳು ಸಂಭವಿಸಿವೆ. ಸ್ಥಳೀಯರು ಮತ್ತು ಪೊಲೀಸರ ಪ್ರಕಾರ, ಕುಸಿತದ ಸಮಯದಲ್ಲಿ ಒಂದು ಜೋರಾದ ಶಬ್ದ ಕೇಳಿಬಂದಿತ್ತು, ನಂತರ ಸೇತುವೆಯ ಮಧ್ಯದ ಭಾಗವು ಕುಸಿದುಬಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತಾಂತ್ರಿಕ ತಜ್ಞರ ತಂಡವನ್ನು ಘಟನಾಸ್ಥಳಕ್ಕೆ ಕಳುಹಿಸಿ, ಕುಸಿತದ ಕಾರಣವನ್ನು ತನಿಖೆ ಮಾಡುವಂತೆ ಸೂಚಿಸಿದ್ದಾರೆ.

ಸ್ಥಳೀಯರ ಆರೋಪ

ಸ್ಥಳೀಯ ನಿವಾಸಿಗಳು ಈ ಸೇತುವೆಯು ದಶಕಗಳಿಂದ ದುರಸ್ಥಿಯಾಗದೆ, ದುರ್ಬಲ ಸ್ಥಿತಿಯಲ್ಲಿತ್ತು ಎಂದು ಆರೋಪಿಸಿದ್ದಾರೆ. ಈ ಸೇತುವೆಯನ್ನು ದುರಸ್ತಿ ಮಾಡುವಂತೆ ಬಹುಬಾರಿ ಆಡಳಿತಕ್ಕೆ ಮನವಿ ಮಾಡಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ ಎಂದು ಅವರು ದೂರಿದ್ದಾರೆ. 

ಕಾಂಗ್ರೆಸ್ ಪಕ್ಷವು ಈ ದುರಂತಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. “ಗಂಭೀರಾ ಸೇತುವೆ ಕುಸಿತವು ಗುಜರಾತ್‌ನಲ್ಲಿ ಭ್ರಷ್ಟಾಚಾರದ ಪರಾಕಾಷ್ಠೆಯನ್ನು ತೋರಿಸುತ್ತದೆ. ಈ ದುರಂತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಗೊಂಡವರಿಗೆ ಶೀಘ್ರ ಚಿಕಿತ್ಸೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇವೆ,” ಎಂದು ಕಾಂಗ್ರೆಸ್‌ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಲಾಗಿದೆ. 

ವಡೋದರಾ ಜಿಲ್ಲಾಧಿಕಾರಿ ಅನಿಲ್ ಧಮೇಲಿಯಾ ಅವರು, “ಐದು ಜನರನ್ನು ರಕ್ಷಿಸಲಾಗಿದೆ, ಇಬ್ಬರು ಸಾವನ್ನಪ್ಪಿರುವುದು ದೃಢಪಟ್ಟಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ,” ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥ್  “ಗಂಭೀರಾ ಸೇತುವೆಯ ಕುಸಿತವು ಗುಜರಾತ್‌ನ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತದೆ. ಇದು ದುರಂತವಷ್ಟೇ ಅಲ್ಲ, ಆಡಳಿತದ ವೈಫಲ್ಯವೂ ಆಗಿದೆ,” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »