ರಾಯಚೂರಿನಲ್ಲಿ 4,000 ವರ್ಷಗಳ ಹಿಂದಿನ ಜನವಸತಿ ಕುರುಹು ಪತ್ತೆ

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಈಗ ನಾಲ್ಕುಸಾವಿರ ವರ್ಷಗಳ ಹಿಂದೆಯೇ ಜನವಸತಿ ಇತ್ತು ಎನ್ನುವ ಕುರುಹುಗಳು ಉತ್ಖನನದ ವೇಳೆ ಸಿಕ್ಕಿವೆ.
Maski 4000year old settlement
ಚಿತ್ರ ಕೃಪೆ : ಪ್ರಜಾವಾಣಿ

ಅಶೋಕನ ಶಿಲಾಶಾಸನದಿಂದ ಐತಿಹಾಸಿಕ ಸ್ಥಳವಾಗಿದ್ದ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಈಗ ನಾಲ್ಕುಸಾವಿರ ವರ್ಷಗಳ ಹಿಂದೆಯೇ ಜನವಸತಿ ಇತ್ತು ಎನ್ನುವ ಕುರುಹುಗಳು ಉತ್ಖನನದ ವೇಳೆ ಸಿಕ್ಕಿವೆ.

ಮೌರ್ಯ ಚಕ್ರವರ್ತಿ ಅಶೋಕನ ಕಾಲದ ಶಾಸನ ಮಸ್ಕಿಯನ್ನು ಮೊಟ್ಟಮೊದಲ ಬಾರಿಗೆ ಪುರಾತತ್ತ್ವ ಶಾಸ್ತ್ರದ ವ್ಯಾಪ್ತಿಗೆ ಸೇರಿಸಿತ್ತು. ಈಗ, ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ ಮತ್ತು ಭಾರತದ 20ಕ್ಕೂ ಹೆಚ್ಚು ಸಂಶೋಧಕರ ತಂಡವು ಮಸ್ಕಿ ಪಟ್ಟಣದಲ್ಲಿ 4,000 ವರ್ಷಗಳಷ್ಟು ಹಿಂದಿನ ಮಾನವ ವಸತಿ ಇತ್ತು ಎಂಬುದಕ್ಕೆ ಪುರಾವೆಗಳನ್ನು ಕಂಡುಕೊಂಡಿದೆ.

ಸಂಶೋಧಕರ ತಂಡ ಕಳೆದ ಮೂರು ತಿಂಗಳಿನಿಂದ ಇಲ್ಲಿನ ಮಲ್ಲಿಕಾರ್ಜುನ ಬೆಟ್ಟ, ಬಯಲು ಆಂಜನೇಯ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ನಡೆಸಿದ ಉತ್ಖನನ ಹಾಗೂ ಸಂಶೋಧನೆ ನಡೆಸುತ್ತಿದೆ. 

ಉತ್ಖನನ ಹಾಗೂ ಸಂಶೋಧನೆಗಾಗಿ ತಂಡ ಇಲ್ಲಿನ 271ಸ್ಥಳಗಳನ್ನು ಗುರುತಿಸಿ, ಆ ಸ್ಥಳಗಳಲ್ಲಿ ಭೂಮಿ ಅಗೆದಾಗ ವಿವಿಧ ಕಾಲಘಟ್ಟದ ಜನವಸತಿ ಇತ್ತು ಎಂಬುದು ದೃಢಪಟ್ಟಿದೆ. ಕ್ರಿ.ಪೂ 11 ಮತ್ತು 14ನೇ ಶತಮಾನಗಳ ನಡುವೆ ಜನರು ಇಲ್ಲಿ ವಾಸಿಸುತ್ತಿದ್ದರು ಎಂಬುದನ್ನು ದೃಢಪಡಿಸುವ ಪುರಾವೆಗಳನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಜನರ ಜೀವನ ಮಟ್ಟ, ಆಹಾರ ಪದ್ಧತಿ ಹಾಗೂ ಅವರು ಬಳಸುತ್ತಿದ್ದ ಮನೆಗಳ ಆಕಾರ, ಮಣ್ಣಿನ ಮಡಕೆ ಸೇರಿದಂತೆ ಅನೇಕ ವಸ್ತುಗಳು ಪತ್ತೆಯಾಗಿವೆ. ಹೆಚ್ಚಿನ ಸಂಶೋಧನೆಗಾಗಿ ಅವುಗಳನ್ನು ಸಂಗ್ರಹಿಸಲಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಇದನ್ನೂ ಓದಿ | ಕೇತಗಾನಹಳ್ಳಿ ಭೂ ಪ್ರಕರಣ: ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್‌ನಿಂದ ರಿಲೀಫ್

ಕೇಂದ್ರ ಪುರಾತತ್ವ ಇಲಾಖೆಯ ಅನುಮತಿ ಪಡೆದ ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಆ್ಯಂಡ್ರಿಮ್ ಎಂ. ಬವೆರ್, ಕೆನಡಾದ ಮ್ಯಾಕ್ ಗಿಲ್ ವಿಶ್ವವಿದ್ಯಾಲಯದ ಪೀಟರ್ ಜಿ. ಜೋಹಾನ್ಸನ್ ಹಾಗೂ ದೆಹಲಿಯ ನೊಯಿಡಾ ವಿಶ್ವವಿದ್ಯಾಲಯದ ಹೇಮಂತ್ ಕಡಾಂಬಿ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳ ತಂಡ ಈ ಭಾಗದಲ್ಲಿ ಉತ್ಖನನ ಮಾಡಿ ಪ್ರಾಚೀನ ಕಾಲದಲ್ಲಿ ಬಳಕೆಯಲ್ಲಿದ್ದ ಪಳಿಯುಳಿಕೆಗಳನ್ನು ಸಂಗ್ರಹಿಸುತ್ತಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »