ತೆಲಂಗಾಣ ಮಾದರಿಯಲ್ಲಿ ಜಾತಿ ಗಣತಿಗೆ ಒತ್ತಾಯ: ಎಐಸಿಸಿ ಸಭೆ

ಕೇಂದ್ರ ಸರ್ಕಾರದ ಜಾತಿ ಆಧಾರಿತ ಜನಗಣತಿಯನ್ನು ತೆಲಂಗಾಣದ ಸೀಪ್ ಮಾದರಿಯಲ್ಲಿ ನಡೆಸಲು ಕೇಂದ್ರಕ್ಕೆ ಒತ್ತಾಯಿಸುವಂತೆ ಎಐಸಿಸಿ ಸಭೆಯಲ್ಲಿ ನಿರ್ಧರಿಸಲಾಗಿದೆ.
Telangana model caste survey

ಕೇಂದ್ರ ಸರ್ಕಾರದ ಜಾತಿ ಆಧಾರಿತ ಜನಗಣತಿಯನ್ನು ತೆಲಂಗಾಣದ ಸೀಪ್ (ಎಸ್‌ಇಇಇಪಿ) ಮಾದರಿಯಲ್ಲಿ ನಡೆಸುವುದು. ಹಾಗೇಯೇ ಒಬಿಸಿ (ಹಿಂದುಳಿದ ವರ್ಗಗಳ) ಸಮುದಾಯಕ್ಕೆ ಶಿಕ್ಷಣ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ಶೇ.50ರಿಂದ ಶೇ.75ಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಒತ್ತಾಯಿಸಲು, ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ರ್‍ಯಾಲಿಗಳನ್ನು ಆಯೋಜಿಸುವುದು. ಹೀಗೆ ಹಲವು ನಿರ್ಣಯಗಳನ್ನು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಎರಡು ದಿನಗಳ ಕಾಲ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಭೆಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ವಹಿಸಿದ್ದರು. ಈ ಸಭೆಯಲ್ಲಿ ಒಬಿಸಿ ಸಮುದಾಯವನ್ನು ಒಗ್ಗೂಡಿಸುವುದು, ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವರಿಗೆ ಬಲವನ್ನು ತುಂಬುವ ಕುರಿತು ವಿವರವಾದ ಚರ್ಚೆ ನಡೆದಿದೆ. ಒಬಿಸಿ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತು ರಾಜಕೀಯ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದ ಗಮನಕ್ಕೆ ತರಲು ತೀರ್ಮಾನಿಸಲಾಗಿದೆ.

ಸಿದ್ದರಾಮಯ್ಯ ಅವರು ಸಭೆಯ ನಂತರ ಮಾತನಾಡಿ, “ಎಐಸಿಸಿಯ ಒಬಿಸಿ ಸಲಹಾ ಸಮಿತಿಯ ಮೊದಲ ಸಭೆ ಯಶಸ್ವಿಯಾಗಿದೆ. ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಬದ್ಧತೆಗೆ ಧನ್ಯವಾದಗಳು. ಜಾತಿ ಗಣತಿಯನ್ನು ಕೈಗೊಳ್ಳಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಕೀರ್ತಿ ರಾಹುಲ್ ಗಾಂಧಿಯವರಿಗೆ ಸಲ್ಲುತ್ತದೆ. ಇದೊಂದು ಐತಿಹಾಸಿಕ ಸಾಧನೆಯಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತರಿಪಡಿಸಲು ಇದು ಕೇವಲ ಒಂದು ಹೆಜ್ಜೆ. ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಭಾರತವು ಸಮಸಮಾಜವನ್ನು ನಿರ್ಮಿಸಲಿದೆ,” ಎಂದರು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪೈಕಿ, ಭಾರತೀಯ ಜನಗಣತಿ ಆಯೋಗದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ (ಒಆರ್‌ಜಿಐ) ಮೂಲಕ ರಾಷ್ಟ್ರಮಟ್ಟದ ಜಾತಿ ಗಣತಿಯನ್ನು ನಡೆಸಬೇಕು ಎಂದು ಒತ್ತಾಯಿಸಲಾಯಿತು. ಈ ಗಣತಿಯು ತೆಲಂಗಾಣದ ಸೀಪ್ (ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಮತ್ತು ರಾಜಕೀಯ) ಸಮೀಕ್ಷೆಯನ್ನು ಮಾದರಿಯಾಗಿಟ್ಟುಕೊಂಡು, ಪ್ರತಿ ಜಾತಿಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತು ರಾಜಕೀಯ ಸ್ಥಿತಿಯನ್ನು ಒಳಗೊಂಡಿರಬೇಕು. ಇದರ ಜೊತೆಗೆ, ಸಂವಿಧಾನದ ಅನುಚ್ಛೇದ 15(5) ರನ್ವಯ ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಬಿಸಿ ಸಮುದಾಯಕ್ಕೆ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ನಿರ್ಣಯಿಸಲಾಯಿತು.

ಇದನ್ನೂ ಓದಿ | ಜಾತಿ ಎಣಿಕೆಯೊಂದಿಗೆ 16ನೇ ಜನಗಣತಿಗೆ ಕೇಂದ್ರ ಸಜ್ಜು: ಅಮಿತ್ ಶಾ ಘೋಷಣೆ

ಕರ್ನಾಟಕದಲ್ಲಿ 2015ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿತ್ತು. ಈ ಸಮೀಕ್ಷೆಯನ್ನು ಕಾಂತರಾಜು ಆಯೋಗವು ನಡೆಸಿತ್ತಾದರೂ, 2018ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವರದಿಯನ್ನು ಸ್ವೀಕರಿಸಲಿಲ್ಲ. ನಂತರದ ಬಿಜೆಪಿ ಸರ್ಕಾರವೂ ಈ ವರದಿಯನ್ನು ಜಾರಿಗೊಳಿಸಲಿಲ್ಲ. 2023ರಲ್ಲಿ ಜಯಪ್ರಕಾಶ ಹೆಗ್ಡೆ ನೇತೃತ್ವದ ಆಯೋಗವು ಮತ್ತೊಮ್ಮೆ ವರದಿಯನ್ನು ಸಿದ್ಧಪಡಿಸಿತು. ಆದರೆ, ಈ ವರದಿಯು 10 ವರ್ಷಗಳಷ್ಟು ಹಳೆಯದಾದ ಸಮೀಕ್ಷೆಯನ್ನು ಆಧರಿಸಿರುವುದರಿಂದ, ಸಚಿವ ಸಂಪುಟವು ಮರುಸಮೀಕ್ಷೆಗೆ ಆದೇಶಿಸಿದೆ. ಹಿಂದುಳಿದ ವರ್ಗಗಳ ಆಯೋಗವು ಮೂರು ತಿಂಗಳಲ್ಲಿ ಈ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ, ಇದನ್ನು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »