ವೋಟ್ ಕಳ್ಳತನ: ರಾಗಾ ಆಕ್ರೋಶ, ಚುನಾವಣಾ ಆಯೋಗ ತಿರಸ್ಕಾರ

ಕಾಂಗ್ರೆಸ್‌ನ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಚುನಾವಣಾ ಆಯೋಗ (ಇಸಿಐ) ಆಡಳಿತಾರೂಢ ಬಿಜೆಪಿಗೆ ಪ್ರಯೋಜನವಾಗುವಂತೆ ‘ವೋಟ್ ಕಳ್ಳತನ’ದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
RahulGandhi Election Commission

ಕಾಂಗ್ರೆಸ್‌ನ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಚುನಾವಣಾ ಆಯೋಗ (ಇಸಿಐ) ಆಡಳಿತಾರೂಢ ಬಿಜೆಪಿಗೆ ಪ್ರಯೋಜನವಾಗುವಂತೆ ‘ವೋಟ್ ಕಳ್ಳತನ’ದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ವಿರೋಧ ಪಕ್ಷಗಳ ಸ್ವತಂತ್ರ ತನಿಖೆಯು ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ‘ನಿರ್ದಾಕ್ಷಿಣ್ಯ ಕಳ್ಳತನ’ವನ್ನು ಬಯಲಿಗೆಳೆದಿದೆ ಎಂದು ರಾಹುಲ್ ಗಾಂಧಿ ಆಗಸ್ಟ್ 1, 2025ರಂದು ಸಂಸತ್ ಆವರಣದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. “ನಮಗೆ 100% ಸಾಕ್ಷ್ಯವಿದೆ. ಆಯೋಗದ ಈ ಕೃತ್ಯ ರಾಷ್ಟ್ರದ್ರೋಹಕ್ಕೆ ಸಮಾನ. ತಪ್ಪಿತಸ್ಥರನ್ನು, ರಿಟೈರ್ ಆದರೂ, ಗುರುತಿಸಿ ಕಾನೂನಿನ ಮುಂದೆ ತರುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಚುನಾವಣಾ ಆಯೋಗವು ಶುಕ್ರವಾರ ರಾಹುಲ್‌ರ ಆರೋಪಗಳನ್ನು ‘ಆಧಾರರಹಿತ’ ಎಂದು ತಿರಸ್ಕರಿಸಿದೆ. “ಕರ್ನಾಟಕದ 2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಒಂದೇ ಒಂದು ಅರ್ಜಿಯನ್ನೂ ಸಲ್ಲಿಸಲಿಲ್ಲ. ಚುನಾವಣಾ ಫಲಿತಾಂಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಿಲ್ಲ,” ಎಂದು ಆಯೋಗ ತಿಳಿಸಿದೆ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್, “ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ತಯಾರಿಸಲಾಗಿದ್ದು, ಕಾಂಗ್ರೆಸ್ ಸೇರಿ ಎಲ್ಲ ರಾಜಕೀಯ ಪಕ್ಷಗಳಿಗೆ ಒದಗಿಸಲಾಗಿತ್ತು,” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | ಭಾರತದ ಆರ್ಥಿಕತೆ ‘ಸತ್ತಿದೆ’ : ರಾಹುಲ್ ಗಾಂಧಿ ತೀವ್ರ ಟೀಕೆ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಒಂದು ಕ್ಷೇತ್ರದಲ್ಲಿ 60,000ಕ್ಕೂ ಅಧಿಕ ಮತಗಳ ಕುಕೃತ್ಯಕ್ಕೆ ಸಾಕ್ಷ್ಯವಿದೆ,” ಎಂದು ರಾಹುಲ್‌ರ ಆರೋಪವನ್ನು ಬೆಂಬಲಿಸಿದ್ದಾರೆ. ಬಿಜೆಪಿಯ ಬಿ.ವೈ. ವಿಜಯೇಂದ್ರ, “ಕಾಂಗ್ರೆಸ್ ಕರ್ನಾಟಕದಲ್ಲಿ 136 ಶಾಸಕ ಸ್ಥಾನ ಗೆದ್ದಿದ್ದು ಆಯೋಗದ ಕೃಪೆಯಿಂದಲೇ ಎಂದಾದರೆ, ಈ ಆರೋಪ ತಮಾಷೆಯಲ್ಲವೇ?” ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ಮುನ್ನಡೆಸಿ, ಆಯೋಗಕ್ಕೆ ಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »