ಅಮೆರಿಕದ ಭಾರತೀಯ ರಾಯಭಾರಿಯಾಗಿ ಸೆರ್ಗಿಯೊ ಗೋರ್ ನೇಮಕ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿ ಸೆರ್ಗಿಯೊ ಗೋರ್ ಅವರನ್ನು ಭಾರತಕ್ಕೆ ಹೊಸ ರಾಯಭಾರಿ ನೇಮಕ.
trump appoints sergio gor

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿ ಸೆರ್ಗಿಯೋ ಗೋರ್ ಅವರನ್ನು ಭಾರತಕ್ಕೆ ಹೊಸ ರಾಯಭಾರಿಯಾಗಿ ಆಗಸ್ಟ್ 23ರಂದು ನೇಮಿಸಿದ್ದಾರೆ. ಇದು ಭಾರತ-ಅಮೆರಿಕ ಸಂಬಂಧಗಳ ಸೂಕ್ಷ್ಮ ಹಂತದಲ್ಲಿ ಬಂದ ನಿರ್ಧಾರವಾಗಿದ್ದು, ಗೋರ್ ಅವರನ್ನು ದಕ್ಷಿಣ ಮತ್ತು ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ನೇಮಕ ಮಾಡಲಾಗಿದೆ. 

ಟ್ರಂಪ್ ಅವರು ತಮ್ಮ ಟ್ರೂತ್ ಸೋಶಿಯಲ್ ಮೀಡಿಯಾದಲ್ಲಿ ಈ ಘೋಷಣೆ ಮಾಡಿದ್ದು, “ಜಗತ್ತಿನ ಅತಿ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಮತ್ತು ಅಮೆರಿಕವನ್ನು ಮತ್ತೆ ಶ್ರೇಷ್ಠಗೊಳಿಸಲು ನಾನು ಸಂಪೂರ್ಣವಾಗಿ ವಿಶ್ವಾಸವಿಡಬಹುದಾದ ವ್ಯಕ್ತಿ ಬೇಕು. ಹೀಗಾಗಿ ಸೆರ್ಗಿಯೊ ಗೋರ್ ಅವರನ್ನು ಭಾರತಕ್ಕೆ ಮುಂದಿನ ಅಮೆರಿಕ ರಾಯಭಾರಿಯಾಗಿ ಬಡ್ತಿ ಮಾಡುತ್ತಿದ್ದೇನೆ. ಅವರು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳಿಗೆ ವಿಶೇಷ ರಾಯಭಾರಿಯಾಗಿಯೂ ಸೇವೆ ಸಲ್ಲಿಸಲಿದ್ದಾರೆ” ಎಂದು ಬರೆದಿದ್ದಾರೆ.  

ಸೆರ್ಗಿಯೋ ಗೋರ್(38) ಟ್ರಂಪ್‌ರ ಹಿರಿಯ ಸಹಾಯಕರಾಗಿದ್ದು, ಶ್ವೇತಭವನದ ಪರ್ಸನಲ್ ಆಫೀಸ್ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ.  ಟ್ರಂಪ್ ಅವರಿಗೆ ಆಪ್ತರಾಗಿ, ಅವರ ರಾಜಕೀಯ ಕಾರ್ಯಕ್ರಮಗಳಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಈ ನೇಮಕವು ಭಾರತದೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದ್ದು, ರಷ್ಯಾ ತೈಲ ಖರೀದಿಯಿಂದಾಗಿ ಟ್ರಂಪ್ ಭಾರತದ ಮೇಲೆ ವಿಧಿಸಿದ ಸುಂಕಗಳ ಹಿನ್ನೆಲೆಯಲ್ಲಿ ಬಂದಿದೆ.  ಗೋರ್ ಅವರು ಎರಿಕ್ ಗಾರ್ಸೆಟ್ಟಿಯನ್ನು ಬದಲಿಸಲಿದ್ದು, ಗಾರ್ಸೆಟ್ಟಿ ಅವರ ಅವಧಿ ಜನವರಿ 20, 2025ರಂದು ಮುಗಿದಿತ್ತು.  ಟ್ರಂಪ್ ಅಡಳಿತವು ಗೋರ್ ಅವರನ್ನು “ಮೋಸ್ಟ್ ಲಾಯಲ್, ಫಿಯರ್‌ಲೆಸ್, ಹಾರ್ಡ್‌ವರ್ಕಿಂಗ್” ಎಂದು ಕೊಂಡಾಡಿದೆ.

ಇದನ್ನೂ ಓದಿ | ಯುಎಸ್ ಸುಂಕ ಒತ್ತಡದ ನಡುವೆ ಜೈಶಂಕರ್-ಪುಟಿನ್ ಭೇಟಿ

ಈ ನೇಮಕವು ಭಾರತದೊಂದಿಗಿನ ಸಂಬಂಧಗಳನ್ನು ಸುಧಾರಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಭಾರತದಲ್ಲಿ ಅಮೆರಿಕದ ಹೂಡಿಕೆಗಳು $60 ಬಿಲಿಯನ್ ದಾಟಿದ್ದು, ಈ ನೇಮಕವು ವ್ಯಾಪಾರ ಮತ್ತು ಭದ್ರತಾ ಸಹಕಾರವನ್ನು ಬಲಪಡಿಸಲಿದೆ. ಗೋರ್ ಅವರು ಟ್ರಂಪ್‌ರ ಕಾರ್ಯಸೂಚಿಯನ್ನು ಜಾರಿಗೊಳಿಸಲು ಸಮರ್ಥರಾಗಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ. ಈ ನಿರ್ಧಾರವು ಭಾರತದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಜೊತೆಗೆ ಚೀನಾ ಮತ್ತು ಪಾಕಿಸ್ತಾನದಂತಹ ಸವಾಲುಗಳನ್ನು ಎದುರಿಸುವಲ್ಲಿ ಸಹಕಾರಿ ಆಗಬಹುದು. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »