ಸಂವಿಧಾನ ಮಸೂದೆ ವಿವಾದ: ಕೇಜ್ರಿವಾಲ್‌ರಿಂದ ಶಾಗೆ ಟೀಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂವಿಧಾನ (130ನೇ ತಿದ್ದುಪಡಿ) ಮಸೂದೆಯ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸಿದ್ದಾರೆ.
kejriwal slams amit shah

ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಸಂವಿಧಾನ (130ನೇ ತಿದ್ದುಪಡಿ) ಮಸೂದೆಯ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸಿದ್ದಾರೆ. ಈ ಮಸೂದೆಯು ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯನ್ನು 30 ದಿನಗಳಿಗಿಂತ ಹೆಚ್ಚು ಜೈಲಿನಲ್ಲಿದ್ದರೆ ಹುದ್ದೆಯಿಂದ ತೆಗೆಯುವ ಗುರಿಯನ್ನು ಹೊಂದಿದೆ. ಕೇಜ್ರಿವಾಲ್ ಬಿಜೆಪಿಯನ್ನು ಗುರಿಯಾಗಿಸಿ, ಬಿಜೆಪಿ ಹಗರಣದ ಆರೋಪಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದರು. ನಂತರ ಅವರನ್ನು ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯಾಗಿ ಮಾಡುತ್ತಾರೆ ಎಂದು ಆರೋಪಿಸಿದರು. “ಇಂತಹ ಆರೋಪಿಗಳನ್ನು ಸೇರಿಸಿಕೊಂಡವರಿಗೆ ಎಷ್ಟು ವರ್ಷ ಜೈಲು ಶಿಕ್ಷೆ?” ಎಂದು ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಜ್ರಿವಾಲ್ ತಮ್ಮ 160 ದಿನಗಳ ಜೈಲು ವಾಸವನ್ನು ಉಲ್ಲೇಖಿಸಿ. ಕೇಂದ್ರ ಸರ್ಕಾರ ತಪ್ಪು ಕೇಸ್ ಹಾಕಿತ್ತು ಎಂದರು. ಆದರೆ ಜೈಲಿನಿಂದ ಆಡಳಿತ ನಡೆಸಿದೆ, ಆಗ ವಿದ್ಯುತ್ ಕಡಿತ, ನೀರಿನ ಸಮಸ್ಯೆ ಇರಲಿಲ್ಲ. ಆಸ್ಪತ್ರೆಗಳಲ್ಲಿ ಉಚಿತ ಔಷಧಿಗಳು ಲಭ್ಯವಿದ್ದವು.  ಬಿಜೆಪಿಯು “ವಾಷಿಂಗ್ ಮಷಿನ್” ಇದ್ದಹಾಗೆ ಆರೋಪಿಗಳ ಕೇಸ್‌ಗಳನ್ನು ರದ್ದುಗೊಳಿಸುತ್ತಾರೆ ಎಂದು ಟೀಕಿಸಿದರು.

ಇದನ್ನೂ ಓದಿ | ಸಂಸತ್ತ್‌ನಲ್ಲಿ 130ನೇ ತಿದ್ದುಪಡಿ ಮಸೂದೆ ಮಂಡನೆ: ಅಮಿತ್‌ ಶಾ

ಅಮಿತ್ ಶಾ ಮಸೂದೆಯನ್ನು ಬೆಂಬಲಿಸಿ ಕೇಜ್ರಿವಾಲ್ 2024ರಲ್ಲಿ ಜೈಲಿನಿಂದ ಸರ್ಕಾರ ನಡೆಸಿದ್ದನ್ನು ಉಲ್ಲೇಖಿಸಿದರು. “ಜನರು ಜೈಲಿನಿಂದ ಆಡಳಿತ ನಡೆಸುವ ನಾಯಕರನ್ನು ಬಯಸುತ್ತಾರೆಯೇ?” ಎಂದು ಕೇಳಿದರು. ವಿರೋಧ ಪಕ್ಷಗಳು ಮಸೂದೆಯನ್ನು “ಪ್ರಜಾಪ್ರಭುತ್ವ ವಿರೋಧಿ” ಎಂದು ಕರೆದವು. ಇದನ್ನು ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಳಸಲಾಗುತ್ತದೆ ಎಂದು ಆರೋಪಿಸಿದವು. 

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »