ಆಗಸ್ಟ್ 31ರಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರವರು ಕರ್ನಾಟಕ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ನಿಂದ ಒಂದು ಕಾಲು ಹೊರಗಿಟ್ಟಿದ್ದು, ಬಿಜೆಪಿ ಸಹಕಾರದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದರು ಎಂದು ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ “ಡಿಕೆ ಶಿವಕುಮಾರ್ ಒಂದು ಕಾಲು ಕಾಂಗ್ರೆಸ್ನಲ್ಲಿದೆ, ಇನ್ನೊಂದು ಬಿಜೆಪಿಯಲ್ಲಿದೆ. ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರೊಂದಿಗೆ ದೆಹಲಿಯಲ್ಲಿ ರಹಸ್ಯ ಸಭೆ ನಡೆಸಿ, ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಯೋಜಿಸಿದ್ದರು” ಎಂದು ಹೇಳಿದ್ದಾರೆ.
ಡಿಕೆಶಿಯು ಸೋನಿಯ ಗಾಂಧಿ ಬಗ್ಗೆ ಹಾಡು ಹಾಡಿದರೆ ಸಿದ್ಧರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿ ಡಿಕೆಶಿಗೆ ಆ ಸ್ಥಾನದಲ್ಲಿ ಕೂರಿಸುತಿದ್ದರು, ಆದರೆ ಇವರು ದೇಶದ ಬಗ್ಗೆ ಇರುವ ಆರ್ಎಸ್ಎಸ್ ಗೀತೆ ಹಾಡಿದ್ದರಿಂದ ಟೀಕೆಗಳಿಗೆ ಗುರಿಯಾಗಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.
ಇದನ್ನೂ ಓದಿ | ಸಿದ್ದು V/S ಯತ್ನಾಳ್: ವಿಧಾನಸಭೆಯ ಉಚ್ಚಾಟನೆ ಜಗಳ ವೈರಲ್
ಯತ್ನಾಳ್, ಬಿಜೆಪಿಯಿಂದ ಹೊರಹಾಕಲ್ಪಟ್ಟ ಶಾಸಕರಾಗಿದ್ದು, ಪಕ್ಷದ ವಿರುದ್ಧ ಬಂಡಾಯದ ಧ್ವನಿ ಎತ್ತುತ್ತಲೇ ಇದ್ದಾರೆ. ಅವರ ಈ ಆರೋಪ ಕರ್ನಾಟಕದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಆರೋಪಗಳ ಹಿನ್ನೆಲೆಯಲ್ಲಿ, ಡಿಕೆ ಶಿವಕುಮಾರ್ ಕಾಂಗ್ರೆಸ್ನಲ್ಲಿ ಪ್ರಬಲ ನಾಯಕರಾಗಿದ್ದಾರೆ. ಅವರು ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಲು ಪ್ರಮುಖ ಪಾತ್ರವಹಿಸಿದ್ದಾರೆ. ಆದರೆ, ಯತ್ನಾಳ್ ಅವರ ಆರೋಪಗಳು ಕಾಂಗ್ರೆಸ್ನಲ್ಲಿ ಅಸಮಾಧಾನ ಸೃಷ್ಟಿಸಿದೆ.







