‘ಅಸಮರ್ಥ ಆಡಳಿತದ ಅಂತ್ಯಕ್ಕೆ ನಾಂದಿʼ: ಮಲ್ಲಿಕಾರ್ಜುನ್ ಖರ್ಗೆ

ಮಲ್ಲಿಕಾರ್ಜುನ ಖರ್ಗೆ ಅವರು ಬಿಹಾರದ 2025 ವಿಧಾನಸಭಾ ಚುನಾವಣೆಯನ್ನ ಎನ್‌ಡಿಎ ಸರ್ಕಾರದ "ಭ್ರಷ್ಟ ಮತ್ತು ಅಸಮರ್ಥ ಆಡಳಿತದ ಅಂತ್ಯಕ್ಕೆ ನಾಂದಿ” ಎಂದು ಹೇಳಿದ್ದಾರೆ. 
kharge patna speech bihar
ಚಿತ್ರ ಕೃಪೆ: ಕನ್ನಡ ಪ್ರಭ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಪಾಟ್ನಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಬಿಹಾರದ 2025 ವಿಧಾನಸಭಾ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ “ಭ್ರಷ್ಟ ಮತ್ತು ಅಸಮರ್ಥ ಆಡಳಿತದ ಅಂತ್ಯಕ್ಕೆ ನಾಂದಿ” ಎಂದು ಹೇಳಿದ್ದಾರೆ. 

ಪಾಟ್ನಾದಲ್ಲಿ ನಡೆಯುತ್ತಿರುವ ಈ ಸಿಡಬ್ಲ್ಯೂಸಿ ಸಭೆಯು ಸ್ವಾತಂತ್ರ್ಯೋತ್ತರ ಕಾಲದಲ್ಲಿ ಬಿಹಾರದಲ್ಲಿ ನಡೆಯುವ ಮೊದಲ ಸಭೆಯಾಗಿದೆ. ರಾಜ್ಯದ ರಾಜಕೀಯ ಭೂಮಿಕೆಯನ್ನು ಗಟ್ಟಿಗೊಳಿಸುವ ಉದ್ದೇಶವನ್ನು ಹೊಂದಿದೆ. ಖರ್ಗೆ ಅವರು, “ಬಿಹಾರ ಚುನಾವಣೆಯು ಮೋದಿ ಸರ್ಕಾರದ ಭ್ರಷ್ಟಾಚಾರದ ಅಂತ್ಯದ ಆರಂಭವಾಗಲಿದೆ” ಎಂದು ತಿಳಿಸಿದರು.

ಕೇಂದ್ರದ ಆಡಳಿತಾರೂಢ ಎನ್‌ಡಿಎ ಸರ್ಕಾರದಲ್ಲಿ ಬಿರುಕುಗಳು ಮೂಡುತ್ತಿದ್ದು, ಆಂತರಿಕ ಕಲಹ ಈಗಾಗಲೇ ಬಹಿರಂಗವಾಗಿದೆ ಎಂದು ಹೇಳಿದ್ದಾರೆ. ಈ ಬಿರುಕಿಗೆ ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ನೋಡುತ್ತಿದೆ. ಬಿಹಾರ ಜನತೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿ, ಅಭಿವೃದ್ಧಿ ಪರ ಮತ ಹಾಕಲಿದ್ದಾರೆಂದು ತಿಳಿಸಿದರು.

ಇದನ್ನೂ ಓದಿ | ಇಂಡಿ ಕೂಟ ಅಧಿಕಾರಕ್ಕೆ ಬಂದರೆ 85% ಮೀಸಲಾತಿ: ತೇಜಸ್ವಿ ಯಾದವ್‌

“ಬಿಜೆಪಿ ನಿತೀಶ್ ಅವರನ್ನು ಮಾನಸಿಕ ನಿವೃತ್ತಿಗೆ ಒತ್ತಾಯ ಮಾಡುತ್ತಿದೆ” ಎಂದು ಆರೋಪಿಸಿ, ಜೆಡಿಯು-ಬಿಜೆಪಿ ಮೈತ್ರಿಯನ್ನು “ಲಥ್‌ಬಂಧನ್” ಎಂದು ಟೀಕಿಸಿದರು. ಈ ಚುನಾವಣೆಯಲ್ಲಿ ಬಿಹಾರ ಜನತೆ ಬಿಜೆಪಿಯನ್ನು ತಿರಸ್ಕರಿಸಿ, ಅಭಿವೃದ್ಧಿ ಪರ ಮತ ಹಾಕಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಈ ಚುನಾವಣೆಯಲ್ಲಿ “ವೋಟ್ ಚೋರಿ” ವಿರುದ್ಧದ ಅಭಿಯಾನವನ್ನು ದೃಢಪಡಿಸುತ್ತಿದ್ದು, ಬಿಹಾರದ ಜನತೆಯ ಧ್ವನಿಯಾಗಿ ನಿಲ್ಲುವ ಉದ್ದೇಶ ಹೊಂದಿದೆ. ಖರ್ಗೆ ಅವರ ಭಾಷಣವು ಬಿಜೆಪಿ-ಜೆಡಿಯು ಮೈತ್ರಿಯನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿದೆ.

Share:

ಮತ್ತಷ್ಟು ಸುದ್ದಿ

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »