ಎಸ್.ಎಲ್‌. ಭೈರಪ್ಪನವರ ಚಿತೆಗೆ ಅಗ್ನಿ ಸ್ಪರ್ಶ

ಕನ್ನಡ ಸಾಹಿತ್ಯದ ಅಕ್ಷರ ಮಾಂತ್ರಿಕ ಎಸ್‌.ಎಲ್‌. ಭೈರಪ್ಪನವರು ತಮ್ಮ ಜೀವನದ ‘ಯಾನ’ವನ್ನು ಮುಗಿಸಿ, ಸೆಪ್ಟೆಂಬರ್ 26ರಂದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
sl bhyrappa final journey
ಚಿತ್ರ ಕೃಪೆ: ಪಬ್ಲಿಕ್‌ ಟಿವಿ

ಕನ್ನಡ ಸಾಹಿತ್ಯದ ಅಕ್ಷರ ಮಾಂತ್ರಿಕ ಎಸ್‌.ಎಲ್‌. ಭೈರಪ್ಪನವರು ತಮ್ಮ ಜೀವನದ ‘ಯಾನ’ವನ್ನು ಮುಗಿಸಿ, ಸೆಪ್ಟೆಂಬರ್ 26ರಂದು ಪಂಚಭೂತಗಳಲ್ಲಿ ಲೀನರಾದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಅವರ ಅಂತ್ಯಕ್ರಿಯೆ ನೆರವೇರಿತು. ಭೈರಪ್ಪನವರ ಮಾನಸ ಪುತ್ರಿ ಸಹನಾ ವಿಜಯಕುಮಾರ್ ಅವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ, ಅವರ ಪುತ್ರರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು.  

ಬೆಳಗ್ಗೆಯಿಂದಲೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಗಳು ನಡೆದಿದ್ದವು. ಕುಟುಂಬಸ್ಥರು ಮತ್ತು ಗಣ್ಯರಿಗಾಗಿ ಜರ್ಮನ್ ಟೆಂಟ್‌ ಹಾಕಿ, ಕುರ್ಚಿಗಳನ್ನಿಟ್ಟು ವ್ಯವಸ್ಥೆ ಮಾಡಲಾಗಿತ್ತು. ಮೈಸೂರು ಎಡಿಸಿ ಶಿವರಾಜು ಅವರು ಸ್ಥಳಕ್ಕೆ ಭೇಟಿ ನೀಡಿ, ಎಲ್ಲ ವ್ಯವಸ್ಥೆಗಳನ್ನು ಪರಿಶೀಲಿಸಿದ್ದರು. ಪೊಲೀಸ್ ಭದ್ರತೆಯನ್ನು ಸಹ ನಿಯೋಜಿಸಲಾಗಿತ್ತು.

ಇದನ್ನೂ ಓದಿ | ಸಾಹಿತ್ಯದ ಹೆಸರಿನಲ್ಲಿ ಬೈರಪ್ಪನವರು ನೀಡಿದ್ದು ಅರ್ಧಸತ್ಯಗಳನ್ನು,…

ಎಸ್‌.ಎಲ್‌. ಭೈರಪ್ಪನವರ ಕಾದಂಬರಿಗಳಾದ ‘ಪರ್ವ’, ‘ಗೃಹಭಂಗ’, ‘ದಾಟು’ ಮತ್ತು ‘ತಬ್ಬಲಿಯು ನೀನಾದೆ ಮಗನೆ’ ಕನ್ನಡ ಸಾಹಿತ್ಯಕ್ಕೆ ಅಮರ ಕೊಡುಗೆಯಾಗಿವೆ. ಅವರ ಚಿಂತನಾತ್ಮಕ ಬರವಣಿಗೆ ಜನಮಾನಸವನ್ನು ಆಳವಾಗಿ ಸ್ಪರ್ಶಿಸಿವೆ. ಈ ದಿಗ್ಗಜನ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅವರ ಸಾಹಿತ್ಯ ಪರಂಪರೆಯು ಓದುಗರ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ಚಾಮುಂಡಿಬೆಟ್ಟದ ಚಿತೆಯಲ್ಲಿ ಭೈರಪ್ಪನವರ ದೇಹ ಭಸ್ಮವಾದರೂ, ಅವರ ಕೃತಿಗಳು ಕನ್ನಡಿಗರ ಮನಸ್ಸಿನಲ್ಲಿ ಜೀವಂತವಾಗಿರುತ್ತವೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »