ಟ್ರಂಪ್ ಯುದ್ಧ ನಿಲ್ಲಿಸಲು ಆದೇಶಿಸಿದ್ದರೂ ಗಾಜಾ ಮೇಲೆ ಇಸ್ರೇಲ್ ದಾಳಿ!

ದಕ್ಷಿಣ ಗಾಜಾದ ಅಲ್-ಮವಾಸಿ ಪ್ರದೇಶದಲ್ಲಿ ಶರಣಾರ್ಥಿಗಳ ಟೆಂಟ್‌ನ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಇಬ್ಬರು ಪ್ಯಾಲೆಸ್ತೇನ್  ಮಕ್ಕಳು ಮೃತಪಟ್ಟಿದ್ದಾರೆ.
israel drone strike
ಚಿತ್ರ ಕೃಪೆ: RTE

ದಕ್ಷಿಣ ಗಾಜಾದ ಅಲ್-ಮವಾಸಿ ಪ್ರದೇಶದಲ್ಲಿ ಶರಣಾರ್ಥಿಗಳ ಟೆಂಟ್‌ನ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಇಬ್ಬರು ಪ್ಯಾಲೆಸ್ತೇನ್  ಮಕ್ಕಳು ಸೇರಿ ಆರು ಜನ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿಮಾಡಿದೆ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದು, ಇದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗಾಜಾದ ಮೇಲಿನ ಬಾಂಬ್ ದಾಳಿಗಳನ್ನು ತಕ್ಷಣ ನಿಲ್ಲಿಸುವ ಆದೇಶದ ನಂತರ ಈ ಘಟನೆ ಬೆಳಕಿಗೆ ಬಂದಿದೆ. 

ಈ ಘಟನೆಯು ಎರಡು ವರ್ಷಗಳ ಇಸ್ರೇಲ್-ಹಮಾಸ್ ಯುದ್ಧದಲ್ಲಿ 40,000ಕ್ಕೂ ಹೆಚ್ಚು ಪ್ಯಾಲೆಸ್ಟೀನ್‌ಯರ ಸಾವಿಗೆ ಕಾರಣವಾದ ಜನಾಂಗೀಯ ಯುದ್ಧದ ಹಿನ್ನೆಲೆಯಲ್ಲಿ ಉಂಟಾದಿದ್ದು, ಜಾಗತಿಕ ಮಟ್ಟದಲ್ಲಿ ಆಘಾತ ಮೂಡಿಸಿದೆ.

ಪ್ಯಾಲೆಸ್ತೇನ್ ಉಗ್ರ ಸಂಘಟನೆಯಾದ ಹಮಾಸ್ ತನ್ನ ಕದನ ವಿರಾಮ ಪ್ರಸ್ತಾಪವನ್ನು ಭಾಗಶಃ ಒಪ್ಪಿಕೊಂಡ ನಂತರ, ಟ್ರಂಪ್ ಅವರು ಇಸ್ರೇಲ್‌ಗೆ ಗಾಜಾದ ಮೇಲಿನ ಎಲ್ಲಾ ದಾಳಿಗಳನ್ನು ತಕ್ಷಣ ನಿಲ್ಲಿಸುವಂತೆ ಆದೇಶಿಸಿದ್ದಾರೆ. “ಹಮಾಸ್ ಶಾಂತಿಗೆ ಸಿದ್ಧವಾಗಿದೆ, ಇಸ್ರೇಲ್ ಬಾಂಬ್‌ಗಳನ್ನು ನಿಲ್ಲಿಸಬೇಕು” ಎಂದು ಟ್ರಂಪ್ ಟ್ವೀಟ್ ಮಾಡಿದ್ದರು. ಈ ಆದೇಶವು ಹಮಾಸ್‌ರ ಒಪ್ಪಿಗೆಯ ನಂತರ ಬಂದಿದ್ದು, ಇದರಲ್ಲಿ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆಯನ್ನು ಹಮಾಸ್ ಒಪ್ಪಿಕೊಂಡಿತ್ತು. ಆದರೆ, ಅಲ್-ಮವಾಸಿಯ ದಾಳಿಯು ಇಸ್ರೇಲ್‌ ಈ ಆದೇಶವನ್ನು ಉಲ್ಲಂಘಿಸಿದಂತಾಗಿದೆ.

ಇದನ್ನೂ ಓದಿ | ಗಾಜಾ ಮೇಲೆ ಇಸ್ರೇಲ್‌ ದಾಳಿ: ಅಲ್ ಜಜೀರಾ ಪತ್ರಕರ್ತರ ಹತ್ಯೆ

ಟ್ರಂಪ್ ಅವರ 20 ಅಂಶಗಳ ಗಾಜಾ ಶಾಂತಿ ಯೋಜನೆಯ ಹಲವಾರು ಭಾಗಗಳನ್ನು ಹಮಾಸ್ ಒಪ್ಪಿಕೊಂಡಿದ್ದು, ಇದರಲ್ಲಿ ಒತ್ತೆಯಾಳುಗಳ ಬಿಡುಗಡೆ, ಹಮಾಸ್‌ರ ಸೈನ್ಯ ಸಾಮರ್ಥ್ಯ ನಾಶ ಮತ್ತು ಗಾಜಾದ ಭವಿಷ್ಯದ ಆಡಳಿತದಲ್ಲಿ ಹಮಾಸ್‌ಗೆ ಪಾತ್ರವಿಲ್ಲ ಎಂಬ ಅಂಶಗಳು ಸೇರಿವೆ. ಹಮಾಸ್‌ರ ಪ್ರತಿಕ್ರಿಯೆಯಲ್ಲಿ, “ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ ಮಾಡುವುದು ಮುಖ್ಯ, ಆದರೆ ಗಾಜಾದ ಭವಿಷ್ಯದ ಆಡಳಿತದಲ್ಲಿ ಪ್ಯಾಲೆಸ್ಟೀನ್ ಅಧಿಕಾರವನ್ನು ಸ್ಥಾಪಿಸುವುದು ಅಗತ್ಯ” ಎಂದು ಹೇಳಲಾಗಿದೆ. ಆದರೆ, ಯೋಜನೆಯ ಇತರ ಅಂಶಗಳಲ್ಲಿ ಮಾತುಕತೆಯನ್ನು ಆಗ್ರಹಿಸಿದ್ದು, ಇದು ಭಾಗಶಃ ಒಪ್ಪಿಗೆಯಾಗಿದೆ. ಟ್ರಂಪ್ ಅವರು ಈ ಪ್ರತಿಕ್ರಿಯೆಯನ್ನು ಸ್ವಾಗತಿಸಿ, “ಹಮಾಸ್ ಶಾಂತಿಗೆ ಸಿದ್ಧರಾಗಿದ್ದಾರೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »