ಬಿಗ್‌ಬಾಸ್‌ ಸ್ಪರ್ಧಿಗಳು ರಿಸಾರ್ಟ್‌ಗೆ ಶಿಫ್ಟ್‌, ಅಲ್ಲೂ ನಿಯಮ ಅನ್ವಯ!

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಜಾಲಿವುಡ್ ಸ್ಟುಡಿಯೋದಲ್ಲಿ ನಿರ್ಮಿಸಲಾದ ಬಿಗ್ ಬಾಸ್ ಕನ್ನಡದ ಮನೆಯ ನಿರ್ಮಾಣದಲ್ಲಿ ಸಂಪೂರ್ಣವಾಗಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸೀಲ್ ಮಾಡಿದೆ. 
bigg boss kannada studio

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಜಾಲಿವುಡ್ ಸ್ಟುಡಿಯೋದಲ್ಲಿ ನಿರ್ಮಿಸಲಾದ ಕನ್ನಡದ ಬಿಗ್ ಬಾಸ್ ಸೀಸನ್‌12 ಮನೆಯ ನಿರ್ಮಾಣದಲ್ಲಿ ಸಂಪೂರ್ಣವಾಗಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸೀಲ್ ಮಾಡಿದೆ. 

ಇದರಿಂದ ಜಾಲಿವುಡ್ ಆಡಳಿತ ಮಂಡಳಿಗೆ ದೊಡ್ಡ ಆಘಾತ ಉಂಟಾಗಿದೆ. ನೀರು ಮತ್ತು ಗಾಳಿ ಮಾಲಿನ್ಯ ನಿಯಂತ್ರಣ ಕಾಯ್ದೆಗಳ ಅಡಿಯಲ್ಲಿ ಅಗತ್ಯ ಅನುಮತಿಗಳನ್ನು ಪಡೆಯದಿರುವುದು, ತುರ್ತು ತ್ಯಾಜ್ಯ ನೀರು ಬಿಡುಗಡೆ, ಸ್ವಚ್ಛೀಕರಣ ಘಟಕ (ಎಸ್‌ಟಿಪಿ) ಖಾಲಿಯಾಗಿರುವುದು ಮತ್ತು ಭೂಮಿ ಬಳಕೆ ಉಲ್ಲಂಘನೆಯಂತಹ ಗಂಭೀರ ಆರೋಪಗಳು ಕಂಡುಬಂದಿವೆ. 2024ರ ಮಾರ್ಚ್‌ನಿಂದಲೇ ಎಚ್ಚರಿಕೆ ನೀಡಿದ್ದರೂ, ನಿರ್ವಾಹಕರು ಗಮನ ಹರಿಸಿರಲಿಲ್ಲ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಅಕ್ಟೋಬರ್ 7ರಂದು ರಾಮನಗರ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸ್ಟುಡಿಯೋದ ನಾಲ್ಕು ಗೇಟ್‌ಗಳಲ್ಲಿ ಮೂರು ಗೇಟ್‌ಗಳಿಗೆ ಬೀಗ ಹಾಕಲಾಗಿದೆ. ಬೆಸ್‌ಕಾಂಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶಿಸಲಾಗಿದೆ. ಸೀಸನ್ 12 ಆರಂಭವಾಗಿದ್ದರೂ, 5 ಕೋಟಿ ರೂಪಾಯಿ ವೆಚ್ಚದ ಮನೆಯ ಚಿತ್ರೀಕರಣ ಸ್ಥಗಿತಗೊಂಡಿದೆ. 700ಕ್ಕೂ ಹೆಚ್ಚು ತಂತ್ರಜ್ಞರನ್ನು ಮನೆಗೆ ಕಳುಹಿಸಲಾಗಿದೆ.

17 ಮಂದಿ ಸ್ಪರ್ಧಿಗಳನ್ನು ತಕ್ಷಣವೇ ಬಹಿರಂಗಪಡಿಸಿ, ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿರುವ ಈಗಲ್‌ಟನ್ ರಿಸಾರ್ಟ್‌ಗೆ ಕಾರುಗಳಲ್ಲಿ ಸ್ಥಳಾಂತರಿಸಲಾಗಿದೆ. ಅವರಿಗಾಗಿ 12 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ ರೆಸಾರ್ಟ್ ಒಳಗಡೆಯೇ ಸ್ಪರ್ಧಿಗಳು ವಾಕಿಂಗ್, ಜಾಗಿಂಗ್, ಬ್ರೇಕ್ ಫಾಸ್ಟ್ ಮಾಡಿದ್ದಾರೆ. ಬಿಗ್‌ಬಾಸ್ ಮನೆಯಂತೆ ರೆಸಾರ್ಟ್‌ನಲ್ಲೂ ಕುಟುಂಬಸ್ಥರು, ಸ್ನೇಹಿತರ ಸಂಪರ್ಕಕ್ಕೆ ಸ್ಪರ್ಧಿಗಳು ಬರುವಂತಿಲ್ಲ. ಆಯೋಜಕರ ತಂಡದವರಿಗೆ ಮಾತ್ರ ಸ್ಪರ್ಧಿಗಳ ಭೇಟಿಗೆ ಅವಕಾಶ ನೀಡಲಾಗಿದೆ.

ಈತನಕ ಸ್ಪರ್ಧಿಗಳಿಗೆ ಮೊಬೈಲ್, ಇಂಟರ್ನೆಟ್, ಟಿವಿ ಯಾವ ಸೌಲಭ್ಯಗಳನ್ನು ಒದಗಿಸಿಲ್ಲ ಎನ್ನುವ ಮಾಹಿತಿ ಪಬ್ಲಿಕ್‌ ಟಿವಿ ವರದಿಯಿಂದ ಮಾಹಿತಿ ದೊರೆತಿದೆ. ರೆಸಾರ್ಟ್‌ನ ಭದ್ರತಾ ಸಿಬ್ಬಂದಿ ನಿಗಾದಲ್ಲಿ ಸ್ಪರ್ಧಿಗಳು ಇದ್ದಾರೆ. ರಾಜ್ಯ ವನ್ಯಜೀವಿ ಮತ್ತು ಪರಿಸರ ಸಚಿವ ಇಶ್ವರ್ ಖಂಡ್ರೆ, “ಯಾರೂ ಕಾನೂನಿನ ಮೇಲೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | ಬಿಗ್ ಬಾಸ್‌ ರಿಯಾಲಿಟಿ ಶೋಗೆ ನೋಟಿಸ್: ಜಾಲಿವುಡ್ ಸ್ಟುಡಿಯೋಗೆ ಬೀಳುತ್ತಾ ಬೀಗ!

ಇಂದು (ಅಕ್ಟೋಬರ್ 8) ಜಾಲಿವುಡ್ ಸ್ಟುಡಿಯೋಸ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ. ಶೋವನ್ನು ಬೇರೆಡೆಗೆ ಸ್ಥಳಾಂತರಿಸುವುದೇ ಅಥವಾ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದೇ ಎಂಬ ಚರ್ಚೆ ನಡೆಯುತ್ತಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »