“ಜಾರಕಿಹೊಳಿ-ಮಹದೇವಪ್ಪ ಭೇಟಿ ರಾಜಕೀಯವಲ್ಲ”: ಪರಮೇಶ್ವರ್ ಸ್ಪಷ್ಟನೆ

"ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪರೊಂದಿಗಿನ ಸಭೆಯು ಯಾವುದೇ ರಾಜಕೀಯ ಮೀಟಿಂಗ್ ಅಲ್ಲ" ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
karnataka parameshwar jarkiholi mahadevappa

“ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪರೊಂದಿಗಿನ ಸಭೆಯು ಯಾವುದೇ ರಾಜಕೀಯ ಮೀಟಿಂಗ್ ಅಲ್ಲ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಗುರುವಾರ ಸತೀಶ್ ಜಾರಕಿಹೊಳಿ ಅವರ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಸಭೆಯು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಈ ಸಭೆಯು ಸಾಮಾನ್ಯ ಸ್ನೇಹಿತರ ಚರ್ಚೆಯಾಗಿಯೇ ನಡೆದಿದ್ದು, ಇದರಲ್ಲಿ ಯಾವುದೇ ವಿಶೇಷ ರಾಜಕೀಯ ಉದ್ದೇಶವಿಲ್ಲ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಯು ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯ ಚಂಚಲತೆಯ ಹಿನ್ನೆಲೆಯಲ್ಲಿ ಮಹತ್ವದ್ದಾಗಿದೆ, ಏಕೆಂದರೆ ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನಾಯಕತ್ವ ಬದಲಾವಣೆಯ ಕುರಿತು ಗುಸುಗುಸು ಮಾತುಗಳು ತೀವ್ರಗೊಂಡಿವೆ.

ಗುರುವಾರ (ಅಕ್ಟೋಬರ್ 9) ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಪಾರ್ಟ್‌ಮೆಂಟ್‌ನಲ್ಲಿ ಗೃಹ ಸಚಿವ ಪರಮೇಶ್ವರ, ಸಚಿವರಾದ ಎಚ್.ಸಿ. ಮಹದೇವಪ್ಪ ಅವರೊಂದಿಗೆ ಸಭೆ ನಡೆಸಿದರು. ಈ ಸಭೆಯು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ನಡೆದಿದ್ದರಿಂದ, ಇದು ಸಂಪುಟ ಪುನರ್‌ರಚನೆ ಅಥವಾ ನಾಯಕತ್ವ ಬದಲಾವಣೆಯ ರಹಸ್ಯ ಚರ್ಚೆಯಾಗಿರಬಹುದು ಎಂಬ ಊಹಾಪೋಹಗಳು ಉಂಟಾಗಿದೆ.

ಇದನ್ನೂ ಓದಿ | ಸಿದ್ದರಾಮಯ್ಯರ ಔತಣಕೂಟ: ನವೆಂಬರ್‌ನಲ್ಲಿ ಸಂಪುಟ ಪುನರ್‌ರಚನೆ?

ಈ ವಿಚಾರವಾಗಿ ಪರಮೇಶ್ವರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಆ ಸಭೆಯಲ್ಲಿ ಯಾವುದೇ ವಿಶೇಷವಿಲ್ಲ. ಮಾಧ್ಯಮಗಳಿಗೆ ಹೇಗೆ ಕಾಣುತ್ತದೆ ಗೊತ್ತಿಲ್ಲ. ಹಾಗೆ ಸಭೆ ಮಾಡಿರೋದು ಮೊದಲ ಬಾರಿ ಅಲ್ಲ. ಅನೇಕ ಬಾರಿ ನಾನು ಜಾರಕಿಹೊಳಿ, ಮಹದೇವಪ್ಪರೊಂದಿಗೆ ಸಭೆ ಮಾಡಿದ್ದೇವೆ. ನಾವೆಲ್ಲ ಸ್ನೇಹಿತರು. ಕೆಲವು ವಿಷಯಗಳು ಚರ್ಚೆ ಮಾಡಬೇಕು ಅಂದಾಗ ಭೇಟಿ ಮಾಡುತ್ತೇವೆ. ಅದು ಪೊಲಿಟಿಕಲ್ ಮೀಟಿಂಗ್ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »