“ಕೇಂದ್ರದಲ್ಲಿ ಡಿಸೆಂಬರ್ ಕ್ರಾಂತಿ, ನಿತಿನ್ ಗಡ್ಕರಿ ಪ್ರಧಾನಿ”: ಲಾಡ್‌

ಕೇಂದ್ರದಲ್ಲಿ ಸಹ 'ಡಿಸೆಂಬರ್ ಕ್ರಾಂತಿ' ನಡೆಯಲಿದ್ದು, ನಿತಿನ್ ಗಡ್ಕರಿ ಪ್ರಧಾನಿ ಆಗುತ್ತಾರೆ ಎಂಬ ಮಾಹಿತಿ ಇದೆ” ಎಂದು  ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
santosh lad gadkari pm
ಚಿತ್ರ ಕೃಪೆ : zee news

“ಬಿಜೆಪಿಯವರು ರಾಜ್ಯದಲ್ಲಿ ‘ನವೆಂಬರ್ ಕ್ರಾಂತಿ’ ಎಂದು ಹೇಳುತ್ತಿರುವಂತೆ, ಕೇಂದ್ರದಲ್ಲಿ ಸಹ ‘ಡಿಸೆಂಬರ್ ಕ್ರಾಂತಿ’ ನಡೆಯಲಿದ್ದು, ನಿತಿನ್ ಗಡ್ಕರಿ ಪ್ರಧಾನಿ ಆಗುತ್ತಾರೆ ಎಂಬ ಮಾಹಿತಿ ಇದೆ” ಎಂದು  ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದ ಸಂಪುಟ ಪುನಾರಚನೆಯ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಔತಣಕೂಟದಲ್ಲಿ ಸಂಪುಟ ಪುನರ್ ರಚನೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಿಎಂ ಮತ್ತು ಡಿಸಿಎಂಗೆ ಪೂರ್ಣ ಅಧಿಕಾರವಿದ್ದು, ಅಗತ್ಯವಿದ್ದರೆ ಅವರು ಮಾಡಲಿ ಎಂದು ಹೇಳಿದರು. ಆದರೆ, ಬಿಜೆಪಿಯವರು ರಾಜ್ಯದಲ್ಲಿ ‘ನವೆಂಬರ್ ಕ್ರಾಂತಿ’ ಎಂದು ಹೇಳುತ್ತಿರುವಂತೆ, ಕೇಂದ್ರದಲ್ಲಿ ಸಹ ‘ಡಿಸೆಂಬರ್ ಕ್ರಾಂತಿ’ ನಡೆಯಲಿದ್ದು, ನಿತಿನ್ ಗಡ್ಕರಿ ಪ್ರಧಾನಿ ಆಗುತ್ತಾರೆ ಎಂಬ ಮಾಹಿತಿ ಇದೆ ಎಂದು ತಿರುಗೇಟು ನೀಡಿದರು.

ಈ ಹೇಳಿಕೆಯು ರಾಜಕೀಯ ವಲಯಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಂತೋಷ್ ಲಾಡ್ ಅವರು ಬಿಜೆಪಿಯನ್ನು ಟೀಕಿಸುತ್ತಾ, ವೈಯಕ್ತಿಕವಾಗಿ ಬಿಜೆಪಿ ಅಧಿಕಾರದಲ್ಲಿ ಉಳಿಯಬಾರದು ಎಂದು ಬಯಸುವುದಾಗಿ ಹೇಳಿದ್ದಾರೆ. ಆದರೆ, ಅಧಿಕಾರದಲ್ಲಿ ಉಳಿದರೆ ನಿತಿನ್ ಗಡ್ಕರಿ ಅವರಂತಹ ಸಮರ್ಥ ನಾಯಕರು ಪ್ರಧಾನಿ ಆಗಬೇಕು ಎಂದು ಸೂಚಿಸಿದ್ದಾರೆ. ಗಡ್ಕರಿ ಅವರು ರಸ್ತೆ ಸಾರಿಗೆ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದ ಅವರು, ಬಿಜೆಪಿ ನಾಯಕರಲ್ಲಿ ಮೋದಿ ನಾಯಕತ್ವದ ಬಗ್ಗೆ ಅಸಮಾಧಾನವಿದ್ದು, ಅರ್ಥವ್ಯವಸ್ಥೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | ಸಿದ್ದರಾಮಯ್ಯರ ಔತಣಕೂಟ ರಹಸ್ಯ: ಸಂಪುಟ ಪುನರ್‌ಚನೆಯ ಸುಳಿವು!

ಹಿಂದಿನ ಕೆಲವು ಸಂದರ್ಭಗಳಲ್ಲಿ ಸಹ ಲಾಡ್ ಅವರು ಗಡ್ಕರಿ ಅವರನ್ನು ಪ್ರಧಾನಿ ಸ್ಥಾನಕ್ಕೆ ಬೆಂಬಲಿಸಿದ್ದರು. ಉದಾಹರಣೆಗೆ, ಫೆಬ್ರುವರಿಯಲ್ಲಿ ಅವರು ಬಿಜೆಪಿ ಅಧಿಕಾರದಲ್ಲಿ ಉಳಿಯಬಾರದು, ಆದರೆ ಗಡ್ಕರಿ ಪ್ರಧಾನಿ ಆಗಬೇಕು ಎಂದು ಹೇಳಿದ್ದರು. ಅಲ್ಲದೆ, ಆರ್‌ಎಸ್‌ಎಸ್‌ನ 75 ವರ್ಷಗಳ ಅಧಿಕಾರವಧಿಯ ನಿಯಮವನ್ನು ಉಲ್ಲೇಖಿಸಿ, ಮೋದಿ ಬದಲಾವಣೆಯ ಸಾಧ್ಯತೆಯನ್ನು ಸೂಚಿಸಿದ್ದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »