ಆರ್‌ಎಸ್‌ಎಸ್ ನಿಷೇಧ: ಮಣಿಕಂಠ್‌ ರಾಠೋಡ್‌ನಿಂದ ಖರ್ಗೆಗೆ ಬೆದರಿಕೆ!

ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧವಾಗಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿದ್ದರಿಂದ, ರಾಜ್ಯದ ವಿವಿಧ ಭಾಗಗಳಿಂದ ಅವರಿಗೆ ಪರ ವಿರೋಧಗಳು ವ್ಯಕ್ತವಾಗಿವೆ.
priyank kharge rss

ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧವಾಗಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿದ್ದರಿಂದ, ರಾಜ್ಯದ ವಿವಿಧ ಭಾಗಗಳಿಂದ ಅವರಿಗೆ ಪರ ವಿರೋಧಗಳು ವ್ಯಕ್ತವಾಗಿವೆ. ಆದರೆ, ಈ ಹೋರಾಟದ ಮಧ್ಯೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಅವರ ಬಹಿರಂಗ ಬೆದರಿಕೆಯು ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. 

ಅಕ್ಟೋಬರ್ 4ರಂದು ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸರ್ಕಾರಿ ಆಸ್ತಿಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿದ್ದರು. ಇದು ತಮಿಳುನಾಡು ಸರ್ಕಾರದ ಮಾದರಿಯನ್ನು ಅನುಸರಿಸಿ, ಸರ್ಕಾರಿ ಶಾಲೆಗಳು, ಕಾಲೇಜುಗಳು, ಮುಜರಾಯಿ ದೇವಸ್ಥಾನಗಳು ಮತ್ತು ಇತರ ಸರ್ಕಾರಿ ಜಮೀನುಗಳಲ್ಲಿ ಆರ್‌ಎಸ್‌ಎಸ್ ಶಾಖೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿತ್ತು.

ಈ ಪತ್ರದ ನಂತರ, ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದವು. ಅಕ್ಟೋಬರ್ 14ರಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿ, “ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಸರ್ಕಾರಿ ಸಂಸ್ಥೆಗಳಲ್ಲಿ ನಿರ್ಬಂಧಿಸುವುದನ್ನು ಪ್ರಶ್ನಿಸಿದ್ದಕ್ಕೆ, ಕಳೆದ ಎರಡು ದಿನಗಳಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ” ಎಂದು ಬರೆದರು. ಅಲ್ಲದೆ, ಒಂದು ಬೆದರಿಕೆ ಕರೆಯ ವೀಡಿಯೊವನ್ನು ಹಂಚಿಕೊಂಡರು, ಅದರಲ್ಲಿ ಕರೆ ಮಾಡಿದ ವ್ಯಕ್ತಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಅವಾಚ್ಯ ಪದಗಳೊಂದಿಗೆ ಬೆದರಿಕೆ ಹಾಕಿದ್ದನು. ಈ ಕರೆಗಳು ವಿದೇಶಗಳಿಂದ ಬಂದಿರುವಂತೆ ಕಂಡುಬಂದಿದ್ದು, ಪೊಲೀಸರು ಐಪಿ ವಿಳಾಸಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗಿಲ್ಲ ಎಂದು ಹಿಂದಿನ ಘಟನೆಗಳಲ್ಲಿ ತಿಳಿದುಬಂದಿದೆ.

ಮಣಿಕಂಠ್‌ ರಾಥೋಡ್‌ನಿಂದ ಬೆದರಿಕೆಯ ಕರೆ!

ಈ ಮಧ್ಯೆ, ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ಮಣಿಕಂಠ ರಾಠೋಡ್, “ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ಮಾತನಾಡಿ ನಿಷೇಧ ಕೋರಿದ್ದಕ್ಕೆ ಕ್ಷಮೆ ಕೋರಬೇಕು. ಕ್ಷಮೆ ಕೋರದಿದ್ದರೆ, ಇಷ್ಟು ದಿನ ಫೋನ್‌ನಲ್ಲಿ ಬೈಯುತ್ತಿದ್ದೇವೆ, ಮುಂದೆ ನಿಮ್ಮ ಮನೆಗೆ ಬರುವ ಸಾಧ್ಯತೆ ಇದೆ” ಎಂದು ಎಚ್ಚರಿಕೆ ನೀಡಿದರು. ಇದು ಆರ್‌ಎಸ್‌ಎಸ್ ಸ್ವಯಂಸೇವಕರು ಖರ್ಗೆ ಅವರ ಮನೆಗೆ ದಾಳಿ ಮಾಡಬಹುದು ಎಂಬ ಅರ್ಥವನ್ನು ಸೂಚಿಸುತ್ತದೆ. 

ರಾಠೋಡ್ ಅವರು ಪ್ರಿಯಾಂಕ್‌ ಖರ್ಗೆ ವಿರುದ್ಧ ಚಿತ್ತಾಪುರ ಮತಕ್ಷೇತ್ರದಿಂದ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು ಮತ್ತು ಹಿಂದೆಯೂ ಖರ್ಗೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ಆರೋಪಗಳಿವೆ. 2023ರಲ್ಲಿ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದರು ಮತ್ತು 40ಕ್ಕೂ ಹೆಚ್ಚು ಕ್ರಿಮಿನಲ್ ಕೇಸುಗಳು ಅವರ ಮೇಲಿವೆ.

ಈ ಬೆದರಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, “ಇದು ನನಗೆ ಹೊಸದಲ್ಲ. ಈ ವ್ಯಕ್ತಿಯ ಬೆದರಿಕೆ ಶೈಲಿಯೂ ಹೊಸದಲ್ಲ. ಇದಕ್ಕೆ ಬಿಜೆಪಿ ಪಕ್ಷವೇ ಉತ್ತರ ನೀಡಬೇಕು. ಇಂಥ ವ್ಯಕ್ತಿಗಳಿಗೆ ಟಿಕೆಟ್ ನೀಡಿದ ಪಕ್ಷವೇ ಜವಾಬ್ದಾರಿಯಾಗಿರಬೇಕು” ಎಂದು ಕಟುವಾಗಿ ಟೀಕಿಸಿದರು. ಅಲ್ಲದೆ, “ಆರ್‌ಎಸ್‌ಎಸ್ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಅವರನ್ನೂ ಬಿಡಲಿಲ್ಲ, ನನ್ನನ್ನು ಬಿಡುತ್ತಾರೆಯೇ? ನಾನು ಬುದ್ಧ, ಬಸವ ಮತ್ತು ಅಂಬೇಡ್ಕರ್ ತತ್ವಗಳ ಮೇಲೆ ನಡೆಯುತ್ತೇನೆ” ಎಂದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖರ್ಗೆ ಅವರಿಗೆ ಬೆಂಬಲ ನೀಡಿ, “ಪ್ರಿಯಾಂಕ್ ಖರ್ಗೆ ನನಗೆ ಬೆದರಿಕೆಗಳ ಬಗ್ಗೆ ತಿಳಿಸಿದ್ದಾರೆ. ತಮಿಳುನಾಡು ಸರ್ಕಾರದ ಕ್ರಮಗಳನ್ನು ಅಧ್ಯಯನ ಮಾಡಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಖರ್ಗೆ ಅವರ ಭದ್ರತೆಯನ್ನು ಹೆಚ್ಚಿಸಲಾಗುವುದು. ದುಷ್ಟ ಶಕ್ತಿಗಳು ಯಾವಾಗಲೂ ಹೀಗೆಯೇ ಇರುತ್ತವೆ, ನಾವು ಭಯಪಡುವುದಿಲ್ಲ” ಎಂದರು.

ಶಿವಸೇನಾ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ಅವರು ಖರ್ಗೆ ಅವರನ್ನು ಟೀಕಿಸಿ, “ಅವರು ಆರ್‌ಎಸ್‌ಎಸ್ ಭೀತಿಯಿಂದ ಖರ್ಗೆ ಬಳಲುತ್ತಿದ್ದಾರೆ” ಎಂದರು. ಆದರೆ, ಖರ್ಗೆ ಅವರು ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ | “ಆರ್‌ಎಸ್‌ಎಸ್‌ನ ಚಟುವಟಿಕೆ ಸಂವಿಧಾನದ ಮೌಲ್ಯಕ್ಕೆ ವಿರುದ್ಧ” : ಖರ್ಗೆ

ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳು ಸರ್ಕಾರಿ ಸ್ಥಳಗಳಲ್ಲಿ ನಡೆಯುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಆರ್‌ಎಸ್‌ಎಸ್ ಕಾರ್ಯಕ್ರಮಗಳು ನಡೆದಿದ್ದವು, ಅದರಲ್ಲಿ ಅನೇಕ ಸರ್ಕಾರಿ ಶಾಲಾ ಮೈದಾನಗಳಲ್ಲಿಯೇ. ಖರ್ಗೆ ಅವರ ಪತ್ರವು ಈ ಚಟುವಟಿಕೆಗಳು ಯುವಕರಲ್ಲಿ ವಿಭಜನಾತ್ಮಕ ಚಿಂತನೆಗಳನ್ನು ಬಿತ್ತುತ್ತವೆ ಎಂದು ಆರೋಪಿಸಿತ್ತು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »