ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಏಕಾಏಕಿ ಸಾವು!

ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣಮೃಗಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ.
belagavi rani chennamma zoo

ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಭಾರೀ ದುರಂತ ಸಂಭವಿಸಿದೆ. ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣಮೃಗಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಮೃಗಾಲಯದಲ್ಲಿ ಒಟ್ಟು 38 ಕೃಷ್ಣಮೃಗಗಳಿದ್ದು, ಇದರಲ್ಲಿ ಬಹುತೇಕ (ಶೇಕಡಾ70ಕ್ಕೂ ಹೆಚ್ಚು) ಸಾವನ್ನಪ್ಪಿರುವುದು ಅರಣ್ಯ ಇಲಾಖೆ ಮತ್ತು ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. 

ನವೆಂಬರ್ 13ರಂದು ಮೊದಲು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಈಗಾಗಲೇ ಮರಣೋತ್ತರ ಪರೀಕ್ಷೆ ನಡೆಸಿ, ವಿಸೆರಾ ಸ್ಯಾಂಪಲ್‌ಗಳನ್ನು ಮೈಸೂರಿನ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ಹೆಲ್ತ್ ಅಂಡ್ ವೆಟರ್ನರಿ ಬಯೋಲಾಜಿಕಲ್ಸ್ (IAHVB) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಬರಲು ಮುನ್ನವೇ ನವೆಂಬರ್ 15ರ ಶನಿವಾರ ಒಂದೇ ದಿನ ಮತ್ತಷ್ಟು 20 ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ಮೃಗಾಲಯದ ಸಹಾಯಕ ನಿರ್ದೇಶಕ (ಎಸಿಎಫ್) ನಾಗರಾಜ್ ಬಾಳೆಹೊಸೂರು ತಿಳಿಸಿದ್ದಾರೆ. 

ಮೃತಪಟ್ಟ ಕೃಷ್ಣಮೃಗಗಳು ಹೆಚ್ಚಿನವು 4-5 ವರ್ಷ ವಯಸ್ಸಿನವುಗಳಾಗಿದ್ದು, ಆಕಸ್ಮಿಕವಾಗಿ ದೇಹದಲ್ಲಿ ನೀರು ಕಡಿಮೆಯಾಗಿ, ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ, ಬ್ಯಾಕ್ಟೀರಿಯಾ ಇನ್ಫೆಕ್ಷನ್ (ಹೆಮೋರಾಜಿಕ್ ಸೆಪ್ಟಿಸೀಮಿಯಾ ಅಥವಾ ಪೇಸ್ಚುರೆಲ್ಲಾ ಬ್ಯಾಕ್ಟೀರಿಯಾ) ಅಥವಾ ಮಾರಣಾಂತಿಕ ವೈರಸ್‌ ಸೋಂಕು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಬೆಳಕಿಗೆ ಬಂದ ತಕ್ಷಣ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಪ್ರಾಣಿಗಳ ದೇಹಗಳನ್ನು ಮೃಗಾಲಯದ ಆವರಣದಲ್ಲೇ ಸುಟ್ಟು ಹಾಕಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಉಳಿದ 10 ಕೃಷ್ಣಮೃಗಗಳನ್ನು ಪ್ರತ್ಯೇಕಿಸಿ, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಮೃಗಾಲಯದ ಇತರ ಪ್ರಾಣಿಗಳಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ | ಮಲೆ ಮಹದೇಶ್ವರದಲ್ಲಿ ಐದು ಹುಲಿಗಳ ಸಾವು: ವಿಷ ಪ್ರಾಶನದ ಶಂಕೆ

ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯವು ಸುಮಾರು 32 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿದ್ದು, ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ಹಲವು ವನ್ಯ ಪ್ರಾಣಿಗಳಿಗೆ ಆಶ್ರಯ ನೀಡುತ್ತದೆ. ಕೃಷ್ಣಮೃಗಗಳು ಇಲ್ಲಿ ಪ್ರಮುಖ ಆಕರ್ಷಣೆಯಾಗಿದ್ದವು. ಈ ಘಟನೆಯಿಂದ ಪ್ರಾಣಿ ಪ್ರೇಮಿಗಳು ಮತ್ತು ಪರಿಸರವಾದಿಗಳು ಆಘಾತಕ್ಕೊಳಗಾಗಿದ್ದಾರೆ. ಕೃಷ್ಣಮೃಗ (Antilope cervicapra) ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಶೆಡ್ಯೂಲ್-1ರಡಿ ಸಂರಕ್ಷಿತ ಪ್ರಾಣಿಯಾಗಿದ್ದು, ಇಂತಹ ಸಾಮೂಹಿಕ ಸಾವು ದುರದೃಷ್ಟಕರ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »