ಬಿಹಾರ: “ಕೋಮುವಾದ ದೂರವಿಟ್ಟರೆ ಎನ್‌ಡಿಎಗೆ ಬೆಂಬಲ” – ಒವೈಸಿ 

AIMIM ಅಧ್ಯಕ್ಷ ಅಸಾದುದ್ದೀನ್ ಒವೈಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಷರತ್ತುಗಳೊಂದಿಗೆ ಬೆಂಬಲಿ ಸೂಚಿಸಿದ್ದಾರೆ.
owaisi nda support bihar
ಚಿತ್ರ ಕೃಪೆ : The Hindu

ಬಿಹಾರದ ರಾಜಕೀಯ ಚಟುವಟಿಕೆಗಳಲ್ಲಿ ಹೊಸ ತಿರುವು ತಂದಿರುವಂತಿದೆ. ಅಖಿಲ ಭಾರತ ಮಜಲಿಸ್-ಇ-ಇತ್ಥಹಾದ್‌ಉಲ್ ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಒವೈಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಷರತ್ತುಗಳೊಂದಿಗೆ ಬೆಂಬಲ ಸೂಚಿಸಿದ್ದಾರೆ.

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಎಐಎಮ್‌ಐಎಮ್‌ ಸೀಮಾಂಚಲ ಪ್ರದೇಶದಲ್ಲಿ 5 ಸೀಟುಗಳನ್ನು ಗೆದ್ದಿದ್ದು, ಈ ಪ್ರದೇಶದ ಅಭಿವೃದ್ಧಿ ಮತ್ತು ಸಾಮುದಾಯಿಕ ಸಾಮರಸ್ಯಕ್ಕೆ ಒತ್ತು ನೀಡಿ ಒವೈಸಿ ಈ ಹೇಳಿಕೆ ನೀಡಿದ್ದಾರೆ.

ಹೈದರಾಬಾದ್ ಸಂಸದರೂ ಆಗಿರುವ ಒವೈಸಿ, ಬಿಹಾರದ ಈಶಾನ್ಯ ಭಾಗದ ಸೀಮಾಂಚಲ ಪ್ರದೇಶಕ್ಕೆ ಎರಡು ದಿನಗಳ ಪ್ರವಾಸದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. ಸೀಮಾಂಚಲವು ಪೂರ್ಣಿಯಾ, ಕಿಷನ್‌ಗಂಜ್, ಅರರಿಯಾ ಮತ್ತು ಕಟಿಹಾರ್ ಜಿಲ್ಲೆಗಳನ್ನು ಒಳಗೊಂಡಿದ್ದು, ಇಲ್ಲಿ ಮುಸ್ಲಿಂ ಜನಸಂಖ್ಯೆಯ ಪ್ರಾಬಲ್ಯವಿದೆ. ಈ ಪ್ರದೇಶವು ದೀರ್ಘಕಾಲದಿಂದಲೂ ಕಡೆಗಣನೆಗೀಡಾಗಿದೆ. 

ಒವೈಸಿ ಅವರು ಹೇಳಿರುವ ಹಾಗೆ “ಪಾಟ್ನಾದಲ್ಲಿ ರಚನೆಯಾದ ಹೊಸ ಎನ್‌ಡಿಎ ಸರ್ಕಾರಕ್ಕೆ ನಾವು ಶುಭ ಹಾರೈಸುತ್ತೇವೆ. ಆದರೆ ಸೀಮಾಂಚಲ ಪ್ರದೇಶಕ್ಕೆ ನ್ಯಾಯ ಒದಗಿಸಿ, ಕೋಮುವಾದವನ್ನು ದೂರವಿಟ್ಟರೆ ನಾವು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಬಹುದು” ಎಂದು ಅಮೌರ್ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ. 

ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿಯು ಸೀಮಾಂಚಲದಲ್ಲಿ ಅಕ್ರಮ ವಲಸೆಗೆ ಆರೋಪಿಸುತ್ತಿದ್ದು, ಇದು ಜನಸಂಖ್ಯೆಯ ಅಸಮತೋಲನಕ್ಕೆ ಕಾರಣವಾಗುತ್ತಿದೆ ಎಂದು ಹೇಳುತ್ತಿದೆ. ಒವೈಸಿ ಈ ಆರೋಪಗಳನ್ನು ಖಂಡಿಸಿ, ಸರ್ಕಾರವು ಪಾಟ್ನಾ ಮತ್ತು ರಾಜ್‌ಗಿರ್‌ಗೆ ಮಾತ್ರ ಸೀಮಿತವಾಗದೆ, ಈ ಕಡೆಗಣಸಿದ ಪ್ರದೇಶಕ್ಕೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಒವೈಸಿಯ ಎಐಎಮ್‌ಐಎಮ್‌ ಪಕ್ಷವು 2020ರಲ್ಲಿ ಸೀಮಾಂಚಲದಲ್ಲಿ 5 ಸೀಟುಗಳನ್ನು ಗೆದ್ದುಕೊಂಡಿದ್ದರೂ, ನಾಲ್ಕು ಶಾಸಕರು ಆರ್‌ಜೆಡಿ (RJD)ಗೆ ತಿರುಗಿದ್ದರು. ಈ ಬಾರಿ ಗೆದ್ದ 5 ಶಾಸಕರಿಗೆ ಒವೈಸಿ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ನೀಡಿದ್ದಾರೆ. “ನಮ್ಮ ಶಾಸಕರು ಪ್ರತಿ ವಾರದಲ್ಲಿ ಎರಡು ದಿನಗಳು ತಮ್ಮ ಕ್ಷೇತ್ರ ಕಚೇರಿಗಳಲ್ಲಿ ಜನರೊಂದಿಗೆ ಸಂಪರ್ಕದಲ್ಲಿರಬೇಕು. ಅವರು ವ್ಯಾಟ್ಸಪ್‌ ಮೂಲಕ ಫೋಟೋ ಮತ್ತು ಸ್ಥಳ ನಿರ್ದೇಶಕಗಳನ್ನು ನನಗೆ ಕಳುಹಿಸಬೇಕು. ಇದು 6 ತಿಂಗಳುಗಳೊಳಗೆ ಜಾರಿಗೆ ಬರುತ್ತದೆ” ಎಂದು ಹೇಳಿದ್ದಾರೆ. ಇದಲ್ಲದೆ, ಒವೈಸಿ ಪ್ರತಿ 6 ತಿಂಗಳಿಗೊಮ್ಮೆ ಸೀಮಾಂಚಲಕ್ಕೆ ಭೇಟಿ ನೀಡಿ ಜನರೊಂದಿಗೆ ನೇರ ಸಂಪರ್ಕದಲ್ಲಿರಲು ಯೋಜಿಸಿದ್ದಾರೆ.

ಇದನ್ನೂ ಓದಿ | ನಿತೀಶ್ ಕುಮಾರ್‌ ನೇತೃತ್ವದ ಸಚಿವ ಸಂಪುಟದಲ್ಲಿ ಬಿಜೆಪಿಗೆ ಪ್ರಾಬಲ್ಯ!

ಈ ಹೇಳಿಕೆಯು ಬಿಹಾರದ ರಾಜಕೀಯಕ್ಕೆ ಹೊಸ ಆಯಾಮ ನೀಡಿದೆ. ಎನ್‌ಡಿಎ ಮೈತ್ರಿಕೂಟವು 24 ಸೀಮಾಂಚಲ ಕ್ಷೇತ್ರಗಳಲ್ಲಿ 14 ಸೀಟುಗಳನ್ನು ಗೆದ್ದಿದ್ದರೂ, ಎಐಎಮ್‌ಐಎಮ್‌ನ 5 ಸೀಟುಗಳು ಈ ಪ್ರದೇಶದಲ್ಲಿ ಪ್ರಭಾವಶಾಲಿಯಾಗಿವೆ. ಆರ್‌ಜೆಡಿಯಂತಹ ವಿರೋಧ ಪಕ್ಷಗಳೊಂದಿಗೆ ಮೈತ್ರಿಗೆ ಒವೈಸಿ ನಿರಾಕರಿಸಿದ್ದು, ಈಗ ಎನ್‌ಡಿಎಗೆ ಬಾಗಿಲು ತೆರೆದಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »