10 ಲಕ್ಷ ಬಿಹಾರ ಮಹಿಳಾ ಉದ್ಯಮಿಗಳಿಗೆ 1,000 ಕೋಟಿ ವರ್ಗಾವಣೆ

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಇಂದು 'ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ'ಯಡಿ 10 ಲಕ್ಷ ಫಲಾನುಭವಿಗಳಿಗೆ 1,000 ಕೋಟಿ ರೂಪಾಯಿಗಳನ್ನು ವಿತರಿಸಿದರು. 
nitish kumar mahila rojgar

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಸಂಪುಟ ಸಹೋದ್ಯೋಗಿಗಳು, ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಯಡಿ 10 ಲಕ್ಷ ಫಲಾನುಭವಿಗಳಿಗೆ 1,000 ಕೋಟಿ ರೂಪಾಯಿಗಳನ್ನು ವಿತರಿಸಿದರು. 

ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ವ್ಯವಸ್ಥೆಯ ಮೂಲಕ ಪ್ರತಿಯೊಬ್ಬ ಮಹಿಳೆಗೆ 10,000 ರೂಪಾಯಿಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಯಿತು. ಈ ಯೋಜನೆಯು ಬಿಹಾರದ ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಿ, ಸ್ವಾವಲಂಬನೆಗೆ ಪ್ರೇರಣೆ ನೀಡುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಐದನೇ ಬಾರಿಗೆ ಅಧಿಕಾರಕ್ಕೆ ಮರಳಿದ ನಿತೀಶ್ ಕುಮಾರ್ ಅವರ ಈ ನಿರ್ಧಾರವು ರಾಜ್ಯದ ಮಹಿಳಾ ಸಮುದಾಯದಲ್ಲಿ ಭಾರೀ ಉತ್ಸಾಹವನ್ನು ಹುಟ್ಟಿಸಿದೆ. ಈ ಯೋಜನೆಯ ಮೂಲಕ ಇದುವರಗೆ 1.56 ಕೋಟಿ ಮಹಿಳೆಯರು ಹಣವನ್ನು ಪಡೆದಿದ್ದಾರೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಶ್ರವಣ್ ಕುಮಾರ್ ತಿಳಿಸಿದರು. “ಈ ಹಣವನ್ನು ಸ್ವ ಉದ್ಯೋಗಕ್ಕಾಗಿ ಬಳಸುವ ಮಹಿಳೆಯರಿಗೆ ಮುಂದೆ 2 ಲಕ್ಷ ರೂಪಾಯಿಗಳ ಹೆಚ್ಚುವರಿ ಸಹಾಯ ನೀಡಲಾಗುತ್ತದೆ. ಅವರು ತಮ್ಮ ಉದ್ಯಮವನ್ನು ಯಶಸ್ವಿಯಾಗಿ ನಡೆಸಿದರೆ ಇದು ಇನ್ನಷ್ಟು ಬಲಗೊಳ್ಳುತ್ತದೆ” ಎಂದು ಹೇಳಿದರು. ಈ ಸಹಾಯವು ಕೃಷಿ, ಪಶುಸಂಗೋಪನೆ, ಹಸ್ತಕಲೆ, ಟೈಲರಿಂಗ್, ಬಟ್ಟೆ ನೆಯ್ವು ಮತ್ತು ಇತರ ಸಣ್ಣ ಉದ್ಯಮಗಳಲ್ಲಿ ಬಳಸಬಹುದಾಗಿದೆ.

ಈ ಯೋಜನೆಯು 2025ರ ಆಗಸ್ಟ್‌ನಲ್ಲಿ ಘೋಷಣೆಯಾಗಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 26ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಇದನ್ನು ಉದ್ಘಾಟಿಸಿದ್ದರು. ಆ ಸಂದರ್ಭದಲ್ಲಿ 7,500 ಕೋಟಿ ರೂಪಾಯಿಗಳನ್ನು 75 ಲಕ್ಷ ಮಹಿಳೆಯರಿಗೆ ವರ್ಗಾವಣೆ ಮಾಡಲಾಗಿತ್ತು. ಇದರೊಂದಿಗೆ ಕೇಂದ್ರದ ‘ಲಕ್ಷಪತಿ ದೀದಿ’ ಅಭಿಯಾನಕ್ಕೆ ಹೆಚ್ಚುವರಿ ಬಲ ಸಿಕ್ಕಿತು ಎಂದು ಮೋದಿ ಹೇಳಿದ್ದರು. ನಂತರ ಅಕ್ಟೋಬರ್ 3ರಂದು 25 ಲಕ್ಷ ಮಹಿಳೆಯರಿಗೆ 2,500 ಕೋಟಿ ಮತ್ತು ಇನ್ನೊಂದು ಹಂತದಲ್ಲಿ 21 ಲಕ್ಷ ಮಹಿಳೆಯರಿಗೆ 2,100 ಕೋಟಿ ವಿತರಿಸಲಾಗಿತ್ತು. ಇಂದಿನ ಈ ಹಂತವು ಒಟ್ಟು ಫಲಾನುಭವಿಗಳ ಸಂಖ್ಯೆಯನ್ನು 1.56 ಕೋಟಿಗೆ ಏರಿಕೆಯಾಗಿದೆ.

ಇದನ್ನೂ ಓದಿ | ದಾಖಲೆಯ 10ನೇ ಬಾರಿಗೆ ಬಿಹಾರ ಸಿಎಂ ಆದ ನಿತೀಶ್ ಕುಮಾರ್‌

ಬಿಹಾರದ ಜೀವಿಕಾ ಸ್ವಸಹಾಯ ಗುಂಪುಗಳ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ರಾಜ್ಯದಲ್ಲಿ 1.40 ಕೋಟಿ ಗ್ರಾಮೀಣ ಮಹಿಳೆಯರು ಈ ಗುಂಪುಗಳಲ್ಲಿ ಸದಸ್ಯರಾಗಿದ್ದು, ನಗರ ಪ್ರದೇಶಗಳಲ್ಲಿ 3.85 ಲಕ್ಷ ಜೀವಿಕಾ ದೀದಿಗಳು ಸೇರಿದ್ದಾರೆ. ಈ ಯೋಜನೆಯು ಪ್ರತಿ ಕುಟುಂಬದಿಂದ ಒಬ್ಬ ಮಹಿಳೆಯನ್ನು ಆಯ್ಕೆಮಾಡಿ, ಅವಳ ಆಯ್ಕೆಯ ಉದ್ಯಮಕ್ಕೆ ಸಹಾಯ ಮಾಡುವ ಉದ್ದೇಶ ಹೊಂದಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »