ಪ್ರಜ್ವಲ್‌ ರೇವಣ್ಣನಿಗೆ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಈ ಶಿಕ್ಷೆಯನ್ನು ಅಮಾನತ್ತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಸಂಪೂರ್ಣವಾಗಿ ತಿರಸ್ಕರಿಸಿದೆ.
Prajwal Revanna rape case
ಚಿತ್ರ ಕೃಪೆ : ನ್ಯೂಸ್‌ ಫಸ್ಟ್

ಅತ್ಯಾಚಾರ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಈ ಶಿಕ್ಷೆಯನ್ನು ಅಮಾನತ್ತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಸಂಪೂರ್ಣವಾಗಿ ತಿರಸ್ಕರಿಸಿದೆ.

ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ ನಾಯ್ಕ್ ಅವರಿದ್ದ ದ್ವಿಸದಸ್ಯ ಪೀಠವು ಪ್ರಕರಣದ ಗಂಭೀರತೆ, ಸಾಕ್ಷ್ಯಗಳ ಸ್ವರೂಪ ಮತ್ತು ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದಾದ ಸಾಧ್ಯತೆಯನ್ನು ಪರಿಗಣಿಸಿ ಈ ಆದೇಶ ಹೊರಡಿಸಿದೆ. ಮೇಲ್ಮನವಿಯ ಮುಖ್ಯ ವಿಚಾರಣೆಯನ್ನು ಜನವರಿ 12, 2026ಕ್ಕೆ ಮುಂದೂಡಲಾಗಿದೆ.

2021ರಲ್ಲಿ ಹೊಳೆನರಸೀಪುರದ ಗನ್ನಿಕಾಡ ತೋಟದ ಮನೆಯಲ್ಲಿ ಮತ್ತು ಬೆಂಗಳೂರಿನ ನಿವಾಸದಲ್ಲಿಯೂ ಮನೆಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯ ಮೇಲೆ ಎರಡು ಬಾರಿ ಅತ್ಯಾಚಾರ ನಡೆಸಲಾಗಿದೆ ಎಂಬ ಆರೋಪವಿದೆ. ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ತನ್ನ ಸ್ಥಾನ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಆ ದಿನಗಳಲ್ಲಿ ಮಹಿಳೆಯನ್ನು ತೋಟದ ಮನೆಯಲ್ಲಿಯೇ ಇರಿಸಿಕೊಂಡು ಧಮಕಿ ಹಾಕಿ ಅತ್ಯಾಚಾರ ಮಾಡಲಾಗಿತ್ತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್ 2, 2025ರಂದು ಪ್ರಜ್ವಲ್ ರೇವಣ್ಣ ಅವರನ್ನು ದೋಷಿಯೆಂದು ಘೋಷಿಸಿ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಜೊತೆಗೆ ₹11.50 ಲಕ್ಷ ದಂಡ ವಿಧಿಸಿ, ಅದರಲ್ಲಿ ₹11.25 ಲಕ್ಷವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿತ್ತು.

ರೇವಣ್ಣ ಪರ ವಕೀಲರು ಹೈಕೋರ್ಟ್‌ನಲ್ಲಿ ಹಲವು ಆಕ್ಷೇಪಣೆಗಳನ್ನು ಎತ್ತಿ ಹಿಡಿದಿದ್ದರು – ಸಂತ್ರಸ್ತೆ 3 ವರ್ಷಗಳ ನಂತರ ದೂರು ನೀಡಿದ್ದಾಳೆ, ಸ್ಟೋರ್ ರೂಮ್‌ನಲ್ಲಿ ಸಿಕ್ಕ ಬಟ್ಟೆಗಳನ್ನು ಗುರುತಿಸಲಾಗಿಲ್ಲ, ಲಾಕ್ ಆಗಿದ್ದ ಕೋಣೆಯಲ್ಲಿ ವೀರ್ಯಾಣು ಹೇಗೆ ಸಿಗುತ್ತದೆ, ವಿಡಿಯೋ ಇದೆ ಎನ್ನಲಾದ ಮೊಬೈಲ್ ವಶಕ್ಕೆ ಪಡೆಯಲಾಗಿಲ್ಲ, ಡಿಎನ್‌ಎ ಪರೀಕ್ಷೆ ನಡೆಸಿದ ಅಧಿಕಾರಿ ಮರಣ ಹೊಂದಿದ್ದಾರೆ ಎಂಬ ವಾದಗಳನ್ನು ಮಂಡಿಸಿದ್ದರು.

ಆದರೆ ವಿಶೇಷ ಸಾರ್ವಜನಿಕ ಅಭಿಯೋಜಕ ರವಿ ವರ್ಮಾ ಕುಮಾರ್ ಈ ಎಲ್ಲ ವಾದಗಳನ್ನು ಪ್ರಬಲವಾಗಿ ತಳ್ಳಿ, ಅಪರಾಧದ ಗಂಭೀರತೆ, ಸಂತ್ರಸ್ತೆಯ ಸ್ಥಿರ ಸಾಕ್ಷ್ಯ, ಆರೋಪಿಯ ಅಧಿಕಾರ ದುರ್ಬಳಕೆ ಮತ್ತು ಜಾಮೀನು ನೀಡಿದರೆ ಸಾಕ್ಷಿಗಳಿಗೆ ಧಮಕಿ ಉಂಟಾಗಬಹುದು ಎಂಬ ಅಂಶಗಳನ್ನು ಒತ್ತಿ ಹೇಳಿದರು. ಹೈಕೋರ್ಟ್ ಈ ವಾದವನ್ನು ಸ್ವೀಕರಿಸಿತು.

ಇದನ್ನೂ ಓದಿ | ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ವಿಶೇಷ ನ್ಯಾಯಾಲಯ ತೀರ್ಪು

ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಇತರ ಮೂರು ಪ್ರಕರಣಗಳ ತನಿಖೆಯೂ ಮುಂದುವರಿದಿದೆ. 2024ರ ಮೇ ತಿಂಗಳಲ್ಲಿ ಜರ್ಮನಿಯಿಂದ ವಾಪಸ್ ಬಂದ ತಕ್ಷಣ ಬಂಧಿಸಲ್ಪಟ್ಟಿದ್ದ ಅವರು ಈಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಈ ತೀರ್ಪು ಮಹಿಳಾ ಸುರಕ್ಷತೆ ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಕಾನೂನಿನ ಕಠಿಣ ನಿಲುವಿಗೆ ಬಲವಾದ ಸಂದೇಶವಾಗಿದೆ.  

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »