ಚಳಿಗಾಲದ ಅಧಿವೇಶನಕ್ಕೆ ತೆರೆ: ಓಂ ಬಿರ್ಲಾ ಕೊಠಡಿಯಲ್ಲಿ ಒಂದಾದ ಆಡಳಿತ ಮತ್ತು ವಿಪಕ್ಷ ನಾಯಕರು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಸಂಸತ್ ಭವನದ ಕೊಠಡಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು.
winter session ends

18ನೇ ಲೋಕಸಭೆಯ ಚಳಿಗಾಲದ ಅಧಿವೇಶನವು ಶುಕ್ರವಾರದಂದು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಅಧಿವೇಶನದ ಕಲಾಪಗಳು ಮುಕ್ತಾಯಗೊಂಡ ಬೆನ್ನಲ್ಲೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಸಂಸತ್ ಭವನದ ಕೊಠಡಿಯಲ್ಲಿ ಆಯೋಜಿಸಿದ್ದ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು.

ಅಧಿವೇಶನದ ಸಂದರ್ಭದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಎಷ್ಟೇ ಜಟಾಪಟಿ, ವಾಗ್ವಾದಗಳು ನಡೆದಿದ್ದರೂ, ಅಧಿವೇಶನ ಮುಕ್ತಾಯದ ನಂತರ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ನಾಯಕರೆಲ್ಲರೂ ಒಂದೆಡೆ ಸೇರಿದ್ದು ವಿಶೇಷವಾಗಿತ್ತು. ಸ್ಪೀಕರ್ ಓಂ ಬಿರ್ಲಾ ಅವರು ಈ ಕುರಿತು ತಮ್ಮ ‘ಎಕ್ಸ್‌’ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದು, “18ನೇ ಲೋಕಸಭೆಯ ಆರನೇ ಅಧಿವೇಶನ ಮುಕ್ತಾಯದ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲಾ ಪಕ್ಷಗಳ ಗೌರವಾನ್ವಿತ ನಾಯಕರೊಂದಿಗೆ ಸಂಸತ್ ಭವನದಲ್ಲಿ ಸೌಹಾರ್ದಯುತ ಮಾತುಕತೆ ನಡೆಯಿತು,” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕಿ ಸುಪ್ರಿಯಾ ಸುಳೆ, ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ಮತ್ತು ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೋದಿ ಮತ್ತು ಪ್ರಿಯಾಂಕಾ ನಡುವೆ ಮಾತುಕತೆ

ಸಾಮಾನ್ಯವಾಗಿ ರಾಜಕೀಯ ವೇದಿಕೆಗಳಲ್ಲಿ ಪರಸ್ಪರ ಟೀಕೆಗಳನ್ನು ಮಾಡಿಕೊಳ್ಳುವ ಪ್ರಧಾನಿ ಮೋದಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಈ ಸಭೆಯಲ್ಲಿ ಒಂದೇ ಕೋಣೆಯಲ್ಲಿ ಕುಳಿತು ನಗುಮುಖದಿಂದ ಮಾತನಾಡಿದ್ದು ಎಲ್ಲರ ಗಮನ ಸೆಳೆಯಿತು. ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಯನಾಡ್‌ನ (ಕೇರಳ) ಪ್ರಸಿದ್ಧ ಆಯುರ್ವೇದ ಔಷಧಿಗಳ ಕುರಿತು ವಿಚಾರಿಸಿದರು ಎನ್ನಲಾಗಿದೆ. ಪ್ರಿಯಾಂಕಾ ಗಾಂಧಿ ಅವರು ಇತ್ತೀಚೆಗೆ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದೆಯಾಗಿ ಆಯ್ಕೆಯಾಗಿದ್ದಾರೆ.

ವಿಪಕ್ಷ ಸದಸ್ಯರು ಅಧಿವೇಶನದ ಅವಧಿ ಕಡಿಮೆ ಇತ್ತು ಎಂದು ಹೇಳಿದಾಗ, ಪ್ರಧಾನಿ ಮೋದಿ ಅವರು ತಮಾಷೆಯಾಗಿ, “ನಿಮ್ಮ ಧ್ವನಿಗೆ ಹೆಚ್ಚು ಶ್ರಮ ಕೊಡುವುದು ನನಗೆ ಇಷ್ಟವಿರಲಿಲ್ಲ, ಅದಕ್ಕೇ ಅಧಿವೇಶನ ಬೇಗ ಮುಗಿಯಿತು,” ಎಂದು ಚಟಾಕಿ ಹಾರಿಸಿದರು. ಇದು ಅಲ್ಲಿ ನೆರೆದಿದ್ದವರಲ್ಲಿ ನಗು ಉಕ್ಕಿಸಿತು.

ಇದೇ ವೇಳೆ, ಪ್ರಧಾನಿ ಮೋದಿಯವರು ಆರ್‌ಎಸ್‌ಪಿ ಪಕ್ಷದ ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಪ್ರೇಮಚಂದ್ರನ್ ಅವರು ಸದನಕ್ಕೆ ಬರುವಾಗ ಯಾವಾಗಲೂ ಸಂಪೂರ್ಣವಾಗಿ ತಯಾರಿ ನಡೆಸಿಕೊಂಡು ಬರುತ್ತಾರೆ ಮತ್ತು ಅತ್ಯುತ್ತಮ ಸಂಸದೀಯ ಪಟು ಎಂದು ಪ್ರಧಾನಿ ಬಣ್ಣಿಸಿದರು. ಇದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪ್ರಿಯಾಂಕಾ ಗಾಂಧಿ ಕೂಡ ದನಿಗೂಡಿಸಿ ಸಹಮತ ವ್ಯಕ್ತಪಡಿಸಿದರು.

ಇದನ್ನೂ ಓದಿ | ಸಂಸತ್ತಿನಲ್ಲಿ ಪಾಸ್ ಆಯ್ತು ‘ವಿಬಿ-ಜಿ ರಾಮ್ ಜಿ’ ಬಿಲ್: ಹೋರಾಟಕ್ಕೆ ಸಜ್ಜಾದ ಕೈ!

ಅಧಿವೇಶನದ ಮುಖ್ಯಾಂಶಗಳು

ಡಿಸೆಂಬರ್ 1 ರಂದು ಪ್ರಾರಂಭವಾಗಿದ್ದ ಚಳಿಗಾಲದ ಅಧಿವೇಶನವು ಡಿಸೆಂಬರ್ 19 ರಂದು ಮುಕ್ತಾಯವಾಯಿತು. ಈ ಅಧಿವೇಶನದಲ್ಲಿ ಲೋಕಸಭೆಯು ಶೇ. 111 ರಷ್ಟು ಕಾರ್ಯಕ್ಷಮತೆಯನ್ನು ಕಂಡಿದೆ ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದರು. ಒಟ್ಟು 92 ಗಂಟೆಗಳ ಕಾಲ ಕಲಾಪ ನಡೆದಿದ್ದು, 10 ಮಸೂದೆಗಳನ್ನು ಮಂಡಿಸಲಾಯಿತು ಮತ್ತು 8 ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಯಿತು. ಇದರಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (MGNREGA) ಸಂಬಂಧಿಸಿದ ಬದಲಾವಣೆಗಳನ್ನು ತರುವ “ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (VB-G RAM G)” ಮಸೂದೆಯು ಪ್ರಮುಖವಾಗಿದ್ದು, ಇದಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »