“ಎಸ್‌ಐಆರ್‌ನಲ್ಲಿ ಎಐ ಬಳಕೆ ಒಂದು ದೊಡ್ಡ ಹಗರಣ”; ಮಮತಾ ಬ್ಯಾನರ್ಜಿ ಕಿಡಿ

2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ SIR ಪ್ರಕ್ರಿಯೆಯು ಒಂದು "ದೊಡ್ಡ ಹಗರಣ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.
mamata banerjee calls

2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯು ಒಂದು “ದೊಡ್ಡ ಹಗರಣ” ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿ. ಇದು ಮತದಾರರ ಹಕ್ಕು ಕಸಿದುಕೊಳ್ಳುವ ತಂತ್ರ ಎಂದು ದೂರಿದ್ದಾರೆ.

ಮಂಗಳವಾರ ಬಂಕುರಾ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದು. “ಮತದಾರರ ಪಟ್ಟಿಯಿಂದ ಹೆಸರನ್ನು ಅಳಿಸಿಹಾಕಲು ಈಗ ಎಐ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಇದೊಂದು ಪಕ್ಕಾ ಹಗರಣ. ನಾನು ಎಚ್ಚರಿಕೆ ನೀಡುತ್ತಿದ್ದೇನೆ, ಒಬ್ಬನೇ ಒಬ್ಬ ಅರ್ಹ ಮತದಾರನ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತೇವೆ (Gherao),” ಎಂದು ಮಮತಾ ಗುಡುಗಿದರು.

ಏನಿದು ‘SIR’ ವಿವಾದ?

ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ‘ವಿಶೇಷ ತೀವ್ರ ಪರಿಷ್ಕರಣೆ‘ (SIR) ಕೈಗೊಂಡಿದೆ. ಮೃತಪಟ್ಟವರು, ಸ್ಥಳಾಂತರಗೊಂಡವರು ಮತ್ತು ನಕಲಿ ಮತದಾರರನ್ನು ಪತ್ತೆಹಚ್ಚಲು ಎಐ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ವರದಿಗಳು ಹೇಳಿವೆ. ಆದರೆ, ಮಮತಾ ಬ್ಯಾನರ್ಜಿ ಅವರ ಪ್ರಕಾರ, ಈ ತಂತ್ರಜ್ಞಾನದ ನೆಪದಲ್ಲಿ ಬಡವರು ಮತ್ತು ಸಾಮಾನ್ಯ ಜನರನ್ನು ಗುರಿಯಾಗಿಸಲಾಗುತ್ತಿದೆ.

“ಈ ಪರಿಷ್ಕರಣೆಯ ಹೆಸರಿನಲ್ಲಿ ಜನರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ದಾಖಲೆಗಳ ಪರಿಶೀಲನೆ ನೆಪದಲ್ಲಿ ವೃದ್ಧರನ್ನು ಅಲೆದಾಡಿಸಲಾಗುತ್ತಿದೆ. ಈ ಮಾನಸಿಕ ಒತ್ತಡ ತಾಳಲಾರದೆ ರಾಜ್ಯದಲ್ಲಿ ಈಗಾಗಲೇ ಸುಮಾರು 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ,” ಎಂದು ಮಮತಾ ಬ್ಯಾನರ್ಜಿ ಆಘಾತಕಾರಿ ಹೇಳಿಕೆ ನೀಡಿದರು.

ಇದನ್ನೂ ಓದಿ | “ನಮಗೆ 5 ವರ್ಷ ಕೊಡಿ, ಚಿನ್ನದ ಬಂಗಾಳ ಮಾಡುತ್ತೇವೆ”: ದೀದಿ ಕೋಟೆಯಲ್ಲಿ ಅಮಿತ್ ಶಾ

ಬಿಜೆಪಿಯ ‘ಚಿನ್ನದ ಬಂಗಾಳ’ ಕನಸಿಗೆ ಟಾಂಗ್: 

ಬಿಜೆಪಿಯ ಘೋಷವಾಕ್ಯವಾದ ‘ಸೋನಾರ್ ಬಾಂಗ್ಲಾ‘ (ಚಿನ್ನದ ಬಂಗಾಳ) ಬಗ್ಗೆ ವ್ಯಂಗ್ಯವಾಡಿದ ದೀದಿ, “ಚುನಾವಣೆ ಬಂದಾಗ ಇವರು ಬಂಗಾಳವನ್ನು ಚಿನ್ನದ ನಾಡಾಗಿಸುತ್ತೇವೆ ಎಂದು ಭಾಷಣ ಬಿಗಿಯುತ್ತಾರೆ. ಆದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಭಾಷಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಅಲ್ಲಿ ಬಂಗಾಳಿಗಳನ್ನು ಥಳಿಸಲಾಗುತ್ತಿದೆ. ಹೀಗಿರುವಾಗ ಅವರು ಇಲ್ಲಿ ಬಂದು ಸೋನಾರ್ ಬಾಂಗ್ಲಾ ಕಟ್ಟುತ್ತಾರೆಯೇ?” ಎಂದು ಪ್ರಶ್ನಿಸಿದರು.

ಮುಂಬರುವ 2026ರ ವಿಧಾನಸಭೆ ಚುನಾವಣೆ ತೃಣಮೂಲ ಕಾಂಗ್ರೆಸ್ (TMC) ಪಾಲಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಹೀಗಾಗಿ, ಬೂತ್ ಮಟ್ಟದ ಕಾರ್ಯಕರ್ತರು ಎಚ್ಚರದಿಂದಿರಬೇಕು ಎಂದು ಮಮತಾ ಕರೆ ನೀಡಿದರು. “ಪ್ರತಿಯೊಂದು ಮನೆಗೆ ಹೋಗಿ ಮತದಾರರ ಪಟ್ಟಿ ಪರಿಶೀಲಿಸಿ. ಯಾರದ್ದಾದರೂ ಹೆಸರು ಬಿಟ್ಟುಹೋಗಿದ್ದರೆ ತಕ್ಷಣ ಗಮನಕ್ಕೆ ತನ್ನಿ. ಬಿಜೆಪಿ ಕುತಂತ್ರಕ್ಕೆ ನಾವು ಬಲಿಯಾಗಬಾರದು,” ಎಂದು ಅವರು ಕಾರ್ಯಕರ್ತರಿಗೆ ಸೂಚನೆ ನೀಡಿದರು.

Share:

ಮತ್ತಷ್ಟು ಸುದ್ದಿ

india labour line

ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಕಾರ್ಮಿಕ ಹಿತ ರಕ್ಷಣೆಗೆ ಇಂಡಿಯಾ ಲೇಬರ್ ಲೈನ್ ಬದ್ಧ

ದೇಶದ ಅಭಿವೃದ್ಧಿಗೆ ತಮ್ಮ ಶ್ರಮವನ್ನು ಅರ್ಪಿಸುತ್ತಿರುವ ವಲಸೆ ಕಾರ್ಮಿಕರು ಇಂದು ಮಾಲೀಕರಿಂದ ವಿವಿಧ ರೀತಿಯ ಶೋಷಣೆಗೆ ಒಳಗಾಗುತ್ತಿರುವುದು ಅತ್ಯಂತ ವಿಷಾದನೀಯವಾಗಿದೆ.

karnataka to rename

ರಾಜ್ಯದ ಎಲ್ಲಾ ಪಂಚಾಯಿತಿ ಇನ್ಮುಂದೆ ‘ಗಾಂಧಿ ಪಂಚಾಯಿತಿ’:  ಡಿಕೆಶಿ ಘೋಷಣೆ

ಮಹಾತ್ಮ ಗಾಂಧೀಜಿಯವರ ಹೆಸರನ್ನು ಗ್ರಾಮೀಣ ಭಾಗದಲ್ಲಿ ಶಾಶ್ವತವಾಗಿ ಉಳಿಸುವ ಮತ್ತು ಅವರ ಗ್ರಾಮ ಸ್ವರಾಜ್ಯದ ಕನಸನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ

karnataka to recruit

ಮುಂದಿನ ಶೈಕ್ಷಣಿಕ ವರ್ಷದೊಳಗೆ 10,800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಲು ಮತ್ತು ಶಿಕ್ಷಕರ ಕೊರತೆಯನ್ನು ಶಾಶ್ವತವಾಗಿ ನೀಗಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.

ಮುಂದೆ ಓದಿ »
lalbagh flower show 2026

ಲಾಲ್‌ಬಾಗ್ ಫ್ಲವರ್ ಶೋಗೆ ತೆರೆ : 8 ಲಕ್ಷಕ್ಕೂ ಅಧಿಕ ಜನರ ವೀಕ್ಷಣೆ!

ಬೆಂಗಳೂರಿನ ಕಿರೀಟಪ್ರಾಯವಾದ ಲಾಲ್‌ಬಾಗ್‌ನಲ್ಲಿ ಕಳೆದ ಹದಿಮೂರು ದಿನಗಳಿಂದ ಕಣ್ಮನ ಸೆಳೆಯುತ್ತಿದ್ದ 219ನೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಈಗ ತೆರೆ ಬಿದ್ದಿದೆ.

ಮುಂದೆ ಓದಿ »
bangalore atm cash theft

ಎಟಿಎಂಗೆ ತುಂಬಬೇಕಿದ್ದ 1.37 ಕೋಟಿ ರೂ. ದೋಚಿ ನೌಕರರು ಎಸ್ಕೇಪ್!

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಗದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗಳಿಗೆ ಹಣ ತುಂಬಿಸುವ ಜವಾಬ್ದಾರಿ ಹೊತ್ತಿದ್ದ ಸಿಬ್ಬಂದಿಗಳೇ ಹಣ

ಮುಂದೆ ಓದಿ »