ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ-ಶ್ರೀರಾಮುಲು ಮಾಡೆಲ್ ಹೌಸ್ ಬೆಂಕಿಗಾಹುತಿ!

ನಗರದ ಬಳ್ಳಾರಿ-ಬೆಳಗಲ್ಲು ರಸ್ತೆಯಲ್ಲಿರುವ, ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಸೇರಿದ ‘ಜಿ ಸ್ಕ್ವೇರ್’ ಲೇಔಟ್‌ನಲ್ಲಿದ್ದ ಮಾಡೆಲ್ ಹೌಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
janardhana reddy sriramulu

ಗಣಿ ನಾಡು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮತ್ತು ಗುಂಡಿನ ದಾಳಿಯ ನಂತರ ಈಗ ‘ಬೆಂಕಿ’ಯ ರಾಜಕೀಯ ಶುರುವಾಗಿದೆ. ನಗರದ ಬಳ್ಳಾರಿ-ಬೆಳಗಲ್ಲು ರಸ್ತೆಯಲ್ಲಿರುವ, ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸೇರಿದ ‘ಜಿ ಸ್ಕ್ವೇರ್’ (G-Square) ಲೇಔಟ್‌ನಲ್ಲಿದ್ದ ಸುಸಜ್ಜಿತ ಮಾಡೆಲ್ ಹೌಸ್‌ಗೆ ಶುಕ್ರವಾರ ಸಂಜೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಸುಮಾರು 100 ಎಕರೆಗೂ ಅಧಿಕ ವಿಸ್ತೀರ್ಣದ ಈ ಲೇಔಟ್‌ನಲ್ಲಿ ನಿವೇಶನ ಖರೀದಿದಾರರಿಗೆ ಮಾದರಿಯಾಗಿ ತೋರಿಸಲು ಈ ಸುಂದರವಾದ ಮನೆಯನ್ನು ನಿರ್ಮಿಸಲಾಗಿತ್ತು. ಶುಕ್ರವಾರ ಸಂಜೆ 6:30ರ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮನೆಯ ಬಹುಪಾಲು ಭಸ್ಮವಾಗಿದೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಜನಾರ್ದನ ರೆಡ್ಡಿ ಅವರ ಸಹೋದರ ಜಿ. ಸೋಮಶೇಖರ್ ರೆಡ್ಡಿ, “ಇದು ಉದ್ದೇಶಪೂರ್ವಕವಾಗಿ ನಡೆದ ಕೃತ್ಯ. ಕಿಡಿಗೇಡಿಗಳು ಪೆಟ್ರೋಲ್ ಮತ್ತು ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ಜನವರಿ 1ರಂದು ನಡೆದಿದ್ದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರು “ನಿಮ್ಮ ಆಸ್ತಿಗೆ ಬೆಂಕಿ ಹಚ್ಚುತ್ತೇವೆ” ಎಂದು ಬೆದರಿಕೆ ಹಾಕಿದ್ದರು. ಈಗ ಅದೇ ಬೆದರಿಕೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಸೋಮಶೇಖರ್ ರೆಡ್ಡಿ ದೂರಿದ್ದಾರೆ. “ಬೆಂಕಿ ಹಚ್ಚುತ್ತಿದ್ದವರನ್ನು ಹಿಡಿಯಲು ಹೋದಾಗ ಅವರು ತಪ್ಪಿಸಿಕೊಂಡು ಓಡಿದ್ದಾರೆ. ಇದು ಶೇ. 100 ರಷ್ಟು ಕಾಂಗ್ರೆಸ್ ಕಾರ್ಯಕರ್ತರೇ ಮಾಡಿದ ಕೆಲಸ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ | ಪೌರಾಯುಕ್ತೆಗೆ ಧಮ್ಕಿ: ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪಕ್ಷದಿಂದ ಅಮಾನತು!

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಬ್ಯಾನರ್ ವಿವಾದಿಂದ ಕುದಿಯುತ್ತಿರುವ ಬಳ್ಳಾರಿಯಲ್ಲಿ ಈ ಹೊಸ ಘಟನೆಯು ಬೆಂಕಿಗೆ ತುಪ್ಪ ಸುರಿದಂತಾಗಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share:

ಮತ್ತಷ್ಟು ಸುದ್ದಿ

karnataka government sslc toppers

ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಸಿಹಿಸುದ್ದಿ: ಲ್ಯಾಪ್‌ಟಾಪ್ ಬದಲಿಗೆ 50,000 ರೂ. ಬಹುಮಾನ!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ ಲ್ಯಾಪ್‌ಟಾಪ್

mamata banerjee

“ಪ. ಬಂಗಾಳದಲ್ಲಿ ಪ್ರತಿದಿನ 4 ಜನರ ಆತ್ಮಹತ್ಯೆ” : ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ!

ರಾಜ್ಯದಲ್ಲಿ ಜಾರಿಯಾಗುತ್ತಿರುವ SIRನಿಂದಾಗಿ ಪ್ರತಿದಿನ ಸರಾಸರಿ ಮೂರರಿಂದ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ. ಬಂಗಾಳ ಸಿಎಂ ಮಮತಾ

kpcc suspends rajeev gowda

ಪೌರಾಯುಕ್ತೆಗೆ ಧಮ್ಕಿ: ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪಕ್ಷದಿಂದ ಅಮಾನತು!

ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ

janardhana reddy sriramulu

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ-ಶ್ರೀರಾಮುಲು ಮಾಡೆಲ್ ಹೌಸ್ ಬೆಂಕಿಗಾಹುತಿ!

ನಗರದ ಬಳ್ಳಾರಿ-ಬೆಳಗಲ್ಲು ರಸ್ತೆಯಲ್ಲಿರುವ, ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಸೇರಿದ ‘ಜಿ ಸ್ಕ್ವೇರ್’ ಲೇಔಟ್‌ನಲ್ಲಿದ್ದ ಮಾಡೆಲ್

ಮುಂದೆ ಓದಿ »
landlord kannada movie

ಬಾಕ್ಸ್ ಆಫೀಸ್‌ನಲ್ಲಿ ‘ಲ್ಯಾಂಡ್​ಲಾರ್ಡ್’ ಅಬ್ಬರ: ಜಮೀನ್ದಾರನ ದರ್ಪಕ್ಕೆ ಸೆಡ್ಡು ಹೊಡೆದ ರಾಚಯ್ಯ!

ದುನಿಯಾ ವಿಜಯ್ ಮತ್ತು ರಾಜ್ ಬಿ. ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಲ್ಯಾಂಡ್​ಲಾರ್ಡ್’ (Landlord) ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ಮುಂದೆ ಓದಿ »
nokia

ರಾಜ್ಯದಲ್ಲಿ ನೋಕಿಯಾ ಸಾಮ್ರಾಜ್ಯ ವಿಸ್ತರಣೆ: ದ್ವಿತೀಯ ಶ್ರೇಣಿಯ ನಗರಗಳಿಗೂ ಹೈಟೆಕ್ ಸ್ಪರ್ಶ!

ರಾಜ್ಯದಲ್ಲಿ ಹೊಸದಾಗಿ ಜಾಗತಿಕ ಸಾಮರ್ಥ್ಯ ಕೇಂದ್ರ (GCC) ಮತ್ತು ಹೆಚ್ಚುವರಿ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ನೋಕಿಯಾ ಕಂಪನಿಯು ತೀವ್ರ

ಮುಂದೆ ಓದಿ »
karnataka high court

ಬೈಕ್ ಟ್ಯಾಕ್ಸಿ ಬ್ಯಾನ್ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶಾಕ್, ಪ್ರಯಾಣಿಕರಿಗೆ ಬಿಗ್ ರಿಲೀಫ್!

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಆ್ಯಪ್

ಮುಂದೆ ಓದಿ »