ರೈಲ್ವೆಯಲ್ಲಿ ಸುರಕ್ಷತೆ ಕ್ರಮ: 74,000 ಬೋಗಿಗಳಲ್ಲಿ ಸಿಸಿಟಿವಿ ಅಳವಡಿಕೆ

ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ರೈಲ್ವೆಯ ಎಲ್ಲ ಬೋಗಿಗಳು ಮತ್ತು ಎಂಜಿನ್ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುವುದು.
Indian Railways  

ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ರೈಲ್ವೆಯ ಎಲ್ಲ ಬೋಗಿಗಳು ಮತ್ತು ಎಂಜಿನ್ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ರೈಲಿನ 74,000 ಬೋಗಿಗಳು ಮತ್ತು 15,000 ಲೋಕೋಮೋಟಿವ್ (ಇಂಜಿನ್)ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ಆದೇಶಿಸಿದ್ದು, ರೈಲ್ವೆ ಪ್ರಯಾಣಿಕರ ಗೋಪ್ಯತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಬೋಗಿಗಳ ಬಾಗಿಲು ಬಳಿಯ ಸಾಮಾನ್ಯ ಸಂಚಾರ ಪ್ರದೇಶದಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಪ್ರತಿ ರೈಲ್ವೆ ಕೋಚ್ನಲ್ಲಿ ಪ್ರತಿ ಪ್ರವೇಶ ದ್ವಾರದ ಬಳಿ ಎರಡು ಉತ್ತಮ ಗುಣಮಟ್ಟದ ಸಿ.ಸಿ.ಟಿ.ವಿ ಕ್ಯಾಮೆರಾಗಳು ಹಾಗೂ ಪ್ರತಿ ‘ಲೋಕೋಮೋಟಿವ್ʼಗಳಲ್ಲಿ ಅದೇ ರೀತಿಯ ಆರು ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಇದು ‘ಲೋಕೋಮೋಟಿವ್ʼನ ಮುಂಭಾಗ, ಹಿಂಭಾಗ ಮತ್ತು ಎರಡೂ ಬದಿಗಳ ದೃಶ್ಯಗಳನ್ನು ಸೆರೆಹಿಡಿಯುತ್ತದೆ ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ | ರಾಜ್ಯ ಬಿಜೆಪಿ ನಾಯಕರ ಮೌನ ಖಂಡನೀಯ: ರೈಲ್ವೆ ಟಿಕೆಟ್ ದರ ಏರಿಕೆಗೆ ಸಿದ್ದರಾಮಯ್ಯ ಆಕ್ರೋಶ

ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ, ನಿಲ್ದಾಣಗಳು ಮತ್ತು ರೈಲುಗಳ ಸುತ್ತಮುತ್ತ ಕಿಡಿಗೇಡಿಗಳ ದುಷ್ಕೃತ್ಯ ತಡೆಯಲು ಈ ಕ್ರಮ ನೆರವಾಗಲಿದೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.

ಅಲ್ಲದೇ, ಉನ್ನತ ರೈಲ್ವೆ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿದ್ದ ರೈಲ್ವೆ ಸಚಿವರು, 100+ ಕಿಮೀ ವೇಗದಲ್ಲಿ ಚಲಿಸುವ ಮತ್ತು ಕಡಿಮೆ ಬೆಳಕಿನಲ್ಲಿ ಚಲಿಸುವ ರೈಲುಗಳಿಗೆ ಸಹ ಉತ್ತಮ ಗುಣಮಟ್ಟದ ದೃಶ್ಯಾವಳಿಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಮತ್ತು ಇಂಡಿಯಾ ಎಐ ಮಿಷನ್ನ ಸಹಯೋಗದೊಂದಿಗೆ, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾದ ಡೇಟಾ ಪರಿಶೀಲನೆಗೆ ಕೃತಕ ಬುದ್ಧಿಮತ್ತೆ (ಎಐ) ಬಳಕೆಯ ಸಹಾಯ ಪಡೆಯಲು ಅಧಿಕಾರಿಗಳು ಮಾರ್ಗಕಂಡುಕೊಂಡರೆ ಉತ್ತಮ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »