ರಾಜ್ಯದ ಪ್ರವಾಸಿ ರಾಜಧಾನಿ : ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಂದು ಗರಿ

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಬಿಡುಗಡೆ ಮಾಡಿದ ಅಧಿಕೃತ “ಕರ್ನಾಟಕದ ಪ್ರವಾಸಿ ತಾಣಗಳ ಕೈಪಿಡಿ”ಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಗುರುತಿಸಲಾದ 106 ಪ್ರವಾಸಿ ತಾಣಗಳೊಂದಿಗೆ ಮಂಡ್ಯವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
Mandya

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಬಿಡುಗಡೆ ಮಾಡಿದ ಅಧಿಕೃತ “ಕರ್ನಾಟಕದ ಪ್ರವಾಸಿ ತಾಣಗಳ ಕೈಪಿಡಿ”ಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಗುರುತಿಸಲಾದ 106 ಪ್ರವಾಸಿ ತಾಣಗಳೊಂದಿಗೆ ಮಂಡ್ಯವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ (98), ಮೈಸೂರು (89), ಬೆಳಗಾವಿ (78) ಸೇರಿದಂತೆ ಎಲ್ಲ ಜಿಲ್ಲೆಗಳನ್ನು ಹಿಂದಿಕ್ಕಿ ಸಕ್ಕರೆ ನಗರಿ ಎನಿಸಿಕೊಂಡಿರುವ ಮಂಡ್ಯ ಈ ಗೌರವಕ್ಕೆ ಪಾತ್ರವಾಗಿದೆ.

ಈ 106 ತಾಣಗಳಲ್ಲಿ ವಿಶ್ವವಿಖ್ಯಾತ ಶಿವನಸಮುದ್ರ ಜಲಪಾತ, ಐತಿಹಾಸಿಕ ಶ್ರೀರಂಗಪಟ್ಟಣ ಕೋಟೆ, ರಂಗನತಿಟ್ಟು ಪಕ್ಷಿಧಾಮ, ಕೃಷ್ಣರಾಜಸಾಗರ ಆಣೆಕಟ್ಟು ಮತ್ತು ಬೃಂದಾವನ ಉದ್ಯಾನವನ, ಬಾಲಮುರಿ-ಎಡಮುರಿ ಜಲಪಾತಗಳು, ಕೊಕ್ಕರೆ ಬೆಳಗೊಳ ಜೈನ ಬಸದಿ, ಮದ್ದೂರು ಶ್ರೀ ಮಹಾಲಕ್ಷ್ಮೀ ದೇವಾಲಯ ಪ್ರಮುಖವಾದವು. ಇವಲ್ಲದೆ ತೊಂಡನೂರು ಕೆರೆ, ಕುಂತಿಬೆಟ್ಟ, ಕೆ.ಎಂ. ದೊಡ್ಡಿ ಗುಡ್ಡ, ಕುಂಚಿಟಿಗ ಕೆರೆ, ಭೀಮೇಶ್ವರ ದೇವಾಲಯ ಮುಂತಾದ ತಾಣಗಳು ಸ್ಥಳೀಯರಿಗೆ ಮತ್ತು  ಚಾರಣ ಪ್ರೀಯರಿಗೆ ಹೆಚ್ಚು ಅಚ್ಚುಮೆಚ್ಚು.

ಪ್ರವಾಸೋದ್ಯಮ ಇಲಾಖೆಯ ದತ್ತಾಂಶದ ಪ್ರಕಾರ 2023-2024ರಲ್ಲಿ ಮಂಡ್ಯ ಜಿಲ್ಲೆಗೆ ಸುಮಾರು 1.15 ಕೋಟಿ ಪ್ರವಾಸಿಗರು ಆಗಮಿಸಿದ್ದಾರೆ. ಇದರಲ್ಲಿ ಶಿವನಸಮುದ್ರಕ್ಕೆ 45 ಲಕ್ಷಕ್ಕೂ ಹೆಚ್ಚು, ಶ್ರೀರಂಗಪಟ್ಟಣಕ್ಕೆ 32 ಲಕ್ಷಕ್ಕೂ ಹೆಚ್ಚು ಮತ್ತು ಕೆಆರ್‌ಎಸ್‌ಗೆ ವಾರಾಂತ್ಯದಲ್ಲಿ ಸರಾಸರಿ 40-50 ಸಾವಿರ ಪ್ರವಾಸಿಗರು ಬರುತ್ತಿದ್ದಾರೆ.

ಈ ಸಾಧನೆಯನ್ನು ಗೌರವಿಸಿ ರಾಜ್ಯ ಸರ್ಕಾರವು 2024-2025ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಗೆ ವಿಶೇಷ ಅಭಿವೃದ್ಧಿ ಅನುದಾನ ಮಂಜೂರು ಮಾಡಿದೆ. ಶಿವನಸಮುದ್ರದಲ್ಲಿ ಹೊಸ ವೀಕ್ಷಣಾ ಗೋಪುರ ಮತ್ತು ವಾಕಿಂಗ್‌ ಟ್ರ್ಯಾಕ್‌, ಶ್ರೀರಂಗಪಟ್ಟಣದಲ್ಲಿ ಡಿಜಿಟಲ್‌ ಮ್ಯೂಸಿಯಂ, ರಂಗನತಿಟ್ಟುಗೆ ಹೆಚ್ಚುವರಿ ಬೋಟಿಂಗ್‌ ಘಟಕ, ಎಲ್ಲ ಪ್ರಮುಖ ತಾಣಗಳಲ್ಲಿ QR ಕೋಡ್‌ ಆಧಾರಿತ ಮಾಹಿತಿ ಫಲಕಗಳನ್ನು ಅಳವಡಿಸುವ ಕಾಮಗಾರಿ ಈಗಾಗಲೇ ಆರಂಭವಾಗಿದೆ.

ಇದನ್ನೂ ಓದಿ | ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾಂಗ್ರೆಸ್‌ ಬೃಹತ್‌ ಸಾಧನಾ ಸಮಾವೇಶ

ಕಾವೇರಿ ನದಿಯ ಆಶೀರ್ವಾದ, ಐತಿಹಾಸಿಕ ಪರಂಪರೆ, ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕ ಕೇಂದ್ರಗಳ ಸಮ್ಮಿಲನದಿಂದ ಮಂಡ್ಯ ಒಂದೇ ಜಿಲ್ಲೆಯಲ್ಲಿ ವೈವಿಧ್ಯಮಯ ಪ್ರವಾಸಿ ಅನುಭವ ನೀಡುತ್ತಿದೆ. ಸಕ್ಕರೆ ಜಿಲ್ಲೆ ಎಂಬ ಹಳೇ ಬಿರುದಿಗೆ ಈಗ “ಕರ್ನಾಟಕದ ಪ್ರವಾಸಿ ರಾಜಧಾನಿ” ಎಂಬ ಹೊಸ ಗೌರವ ಸೇರಿಕೊಂಡಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »