ವಿಧಾನಸೌಧದಲ್ಲಿ ಹೈಡ್ರಾಮಾ: ಭಾಷಣ ಅರ್ಧಕ್ಕೆ ನಿಲ್ಲಿಸಿದ ಗವರ್ನರ್!

ವಿಧಾನಸೌಧದಲ್ಲಿ ಇಂದು ನಡೆದ ಜಂಟಿ ಅಧಿವೇಶನವು ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ಭಾಷಣದ ಕೆಲವೇ ಸಾಲು ಓದಿ ಹೊರಡಿದ್ದಾರೆ.
karnataka governor gehlot

ವಿಧಾನಸೌಧದಲ್ಲಿ ಇಂದು (ಗುರುವಾರ) ನಡೆದ ಜಂಟಿ ಅಧಿವೇಶನವು ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ನೇರ ಸಂಘರ್ಷಕ್ಕೆ ಸಾಕ್ಷಿಯಾಯಿತು. ರಾಜ್ಯಪಾಲರು ಭಾಷಣದ ಕೆಲವೇ ಸಾಲುಗಳನ್ನು ಓದಿ, ಉಳಿದ ಭಾಗವನ್ನು ಓದಿದಂತೆ ಪರಿಗಣಿಸಬೇಕು ಎಂದು ಹೇಳಿ ಹೊರಡಲು ಅನುವಾದರು.

ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ:

ಘಟನೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ನಡೆಯನ್ನು ಕಟುವಾಗಿ ಟೀಕಿಸಿದರು. “ರಾಜ್ಯಪಾಲರು ತಮಗೆ ಬೇಕಾದ ಭಾಷಣ ಓದುವಂತಿಲ್ಲ. ಸಂಪುಟ ಅನುಮೋದಿಸಿದ ಭಾಷಣವನ್ನೇ ಓದುವುದು ಅವರ ಸಾಂವಿಧಾನಿಕ ಕರ್ತವ್ಯ. ನಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರ ನರೇಗಾ (MGNREGA) ಯೋಜನೆಗೆ ತಿದ್ದುಪಡಿ ತರುತ್ತಿರುವುದನ್ನು ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಸ್ತಾಪಿಸಲಾಗಿತ್ತು. ಕೇಂದ್ರದ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯಪಾಲರು ಭಾಷಣ ಓದದೆ ಸದನಕ್ಕೆ ಅಗೌರವ ತೋರಿದ್ದಾರೆ,” ಎಂದು ಹರಿಹಾಯ್ದು. ರಾಜ್ಯಪಾಲರ ವಿರುದ್ಧ ಸುಪ್ರಿಂಕೋರ್ಟ್‌ಗೆ ಹೊಗುವುದಾಗಿ ಸಿದ್ಧರಾಮಯ್ಯ ಹೇಳಿದ್ಧಾರೆ.

ಇದನ್ನೂ ಓದಿ | ತಮಿಳುನಾಡು ಬೆನ್ನಲ್ಲೇ ಕರ್ನಾಟಕದಲ್ಲೂ ‘ಗವರ್ನರ್’ ದಂಗಲ್: ಭಾಷಣಕ್ಕೆ ರಾಜ್ಯಪಾಲ ಗೆಹ್ಲೋಟ್ ನಕಾರ?

ಹರಿಪ್ರಸಾದ್ ಆಕ್ರೋಶ:

ರಾಜ್ಯಪಾಲರು ಪೀಠದಿಂದ ಇಳಿಯುತ್ತಿದ್ದಂತೆ, ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ (B.K. Hariprasad) ಅವರು ರಾಜ್ಯಪಾಲರ ದಾರಿಗೆ ಅಡ್ಡಲಾಗಿ ನಿಂತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸದಸ್ಯರು “ಶೇಮ್ ಶೇಮ್”, “ಬಿಜೆಪಿ ಏಜೆಂಟ್” ಎಂದು ಘೋಷಣೆಗಳನ್ನು ಕೂಗಿದರು.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಮುಂದೆ ಓದಿ »

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಮುಂದೆ ಓದಿ »

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಮುಂದೆ ಓದಿ »