ಹಾರ್ವರ್ಡ್‌ಗೆ ಟ್ರಂಪ್ ಆಘಾತ: ವಿದೇಶಿ ವಿದ್ಯಾರ್ಥಿಗಳ ದಾಖಲಾತಿ ರದ್ದು

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ವಿದೇಶಿ  ವಿದ್ಯಾರ್ಥಿಗಳನ್ನು ದಾಖಲಿಸುವ ಹಕ್ಕನ್ನು ಕಸಿದುಕೊಂಡಿದೆ

ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ವಿದೇಶಿ  ವಿದ್ಯಾರ್ಥಿಗಳನ್ನು ದಾಖಲಿಸುವ ಹಕ್ಕನ್ನು ಕಸಿದುಕೊಂಡಿದೆ. ಈ ಕ್ರಮವು ಗೃಹ ಭದ್ರತಾ ಇಲಾಖೆಯಿಂದ (DHS) ಘೋಷಿಸಿದ್ದು, ಇದು ಹಾರ್ವರ್ಡ್‌ನಲ್ಲಿ ಓದುತ್ತಿರುವ 6,793 ವಿದೇಶಿ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ. ಈ ನಿರ್ಧಾರವು ಭಾರತೀಯ ವಿದ್ಯಾರ್ಥಿಗಳ ಸೇರಿದಂತೆ ಸಾವಿರಾರು ವಿದೇಶಿ ವಿದ್ಯಾರ್ಥಿಗಳ ಕನಸಿಗೆ ತಣ್ಣೀರು ಎರಚಿದೆ.

ಹಾರ್ವರ್ಡ್‌ನ ಮೇಲೆ ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಸಹಕರಿಸಿದ ಆರೋಪ, ಹಾಗೂ ಕ್ಯಾಂಪಸ್‌ನಲ್ಲಿ “ಯಹೂದಿ-ವಿರೋಧಿ, ಭಯೋತ್ಪಾದಕ-ಪರ ಮತ್ತು ಹಿಂಸಾತ್ಮಕ ಚಟುವಟಿಕೆಗಳನ್ನು ಉತ್ತೇಜಿಸಿದ” ಆರೋಪಗಳಿವೆ. ಈ ಕಾರಣಕ್ಕಾಗಿ, ವಿಶ್ವವಿದ್ಯಾಲಯದ ಸ್ಟೂಡೆಂಟ್ ಆಂಡ್ ಎಕ್ಸ್‌ಚೇಂಜ್ ವಿಸಿಟರ್ ಪ್ರೋಗ್ರಾಂ (SEVP) ಪ್ರಮಾಣೀಕರಣವನ್ನು ರದ್ದುಗೊಳಿಸಲಾಗಿದೆ.  

2024-25 ಶೈಕ್ಷಣಿಕ ವರ್ಷದಲ್ಲಿ ಹಾರ್ವರ್ಡ್‌ನ ಒಟ್ಟು ವಿದ್ಯಾರ್ಥಿಗಳಲ್ಲಿ 27.2% (6,793) ವಿದೇಶಿ  ವಿದ್ಯಾರ್ಥಿಗಳಾಗಿದ್ದಾರೆ. 2025-26ರ ಶುಲ್ಕವು $59,320 (60 ಲಕ್ಷ ರೂ.) ಆಗಿದ್ದು, ವಸತಿ ಸೇರಿದಂತೆ ಒಟ್ಟು ವೆಚ್ಚ $87,000 (74.79 ಲಕ್ಷ ರೂ.) ತಲುಪಲಿದೆ. ಈ ಶುಲ್ಕದಲ್ಲಿ ಹೆಚ್ಚಿನ  ಭಾಗವನ್ನು ವಿದೇಶಿ ವಿದ್ಯಾರ್ಥಿಗಳು ಭರಿಸುತ್ತಿದ್ದರು. ಈ ನಿರ್ಧಾರದಿಂದಾಗಿ ವಿಶ್ವವಿದ್ಯಾಲಯದ ಆರ್ಥಿಕತೆಗೆ ದೊಡ್ಡ ಹೊಡೆತವಾಗಲಿದೆ.  

ಹಾರ್ವರ್ಡ್ ಈ ಕ್ರಮವನ್ನು “ಕಾನೂನುಬಾಹಿರ” ಮತ್ತು “ಪ್ರತೀಕಾರದ ಕೆಲಸ ” ಎಂದು ಹೇಳಿದೆ. “140ಕ್ಕೂ ಹೆಚ್ಚು ದೇಶಗಳಿಂದ ಬಂದಿರುವ ವಿದೇಶಿ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯನ್ನು ಶ್ರೀಮಂತಗೊಳಿಸುತ್ತಾರೆ,” ಎಂದು ವಿಶ್ವವಿದ್ಯಾಲಯವು ತಿಳಿಸಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ನಿರ್ಧಾರವನ್ನು ಖಂಡಿಸಿದ್ದಾರೆ. “ನಾವು ಇಲ್ಲಿಗೆ ತಲುಪಲು ಜೀವನಪೂರ್ತಿ ಶ್ರಮಿಸಿದ್ದೇವೆ. ಈಗ ವೀಸಾ ಮತ್ತು ವರ್ಗಾವಣೆಯ ಚಿಂತೆಯಲ್ಲಿದ್ದೇವೆ,” ಎಂದು ಆಸ್ಟ್ರಿಯಾದ ವಿದ್ಯಾರ್ಥಿ ಕಾರ್ಲ್ ಮೊಲ್ಡೆನ್ ಹೇಳಿದ್ದಾರೆ. “ಈ ಕ್ರಮವು ಶೈಕ್ಷಣಿಕ ಗುಣಮಟ್ಟಕ್ಕೆ ಹಾನಿಯುಂಟುಮಾಡುತ್ತದೆ,” ಎಂದು ಅರ್ಥಶಾಸ್ತ್ರ ಪ್ರಾಧ್ಯಾಪಕ ಜೇಸನ್ ಫರ್ಮನ್ ಆಕ್ಷೇಪಿಸಿದ್ದಾರೆ.

Share:

ಮತ್ತಷ್ಟು ಸುದ್ದಿ

ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ

ಅಲೆದಾಟ ಮುಕ್ತ ಆಡಳಿತದತ್ತ ಮೇಲುಕೋಟೆ ಮನೆ ಬಾಗಿಲಿಗೇ ಬಂದ ‘ಸರ್ಕಾರಿ ಸೇವೆ’ ಕಾರ್ಯಕ್ರಮ  ತಂತ್ರಜ್ಞಾನದ ಅರಿವನ್ನು ಆಡಳಿತ ಯಂತ್ರಕ್ಕೆ ವರ್ಗಾಯಿಸಿದ

ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಲು ಮನವಿ

ಕಾಂಗ್ರೆಸ್‌ ಹೈಕಮಾಂಡ್‌ಗೆ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಒತ್ತಾಯ ಮೈಸೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ

ಮುಂದೆ ಓದಿ »

ಬೆಂಗಳೂರಿನಲ್ಲಿ ಮೇ 25 ರಂದು 3ನೇ ಕರ್ನಾಟಕ ಸಂಘಟಕರ ಸಮಾವೇಶ

ಸಾಂಸ್ಕೃತಿಕ ನೀತಿ ಜಾರಿ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಆಗ್ರಹಿಸಿ ರಂಗಕರ್ಮಿಗಳು ಹಾಗೂ ಸಾಂಸ್ಕೃತಿಕ ಸಂಘಟಕರ ಬೃಹತ್‌ ಸಮಾಲೋಚನೆ ಬೆಂಗಳೂರು: ಕರ್ನಾಟಕ

ಮುಂದೆ ಓದಿ »

ಪಾಂಡವಪುರದಲ್ಲಿ ಜೂನ್ 1 ರಿಂದ ‘ಸಾವಯವ ರೈತರ ಸಂತೆ’ ಆರಂಭ

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಜೈವಿಕ ಕ್ರಾಂತಿಯ ಮುನ್ನುಡಿ! ಮಂಡ್ಯ: ಹೈನುಗಾರಿಕೆ ಮತ್ತು ಕಬ್ಬಿನ ಬೆಳೆಯ ಮೂಲಕ ರಾಜ್ಯದ

ಮುಂದೆ ಓದಿ »