ತ್ಯಾಜ್ಯ ಸಂಗ್ರಹ ಆಟೊ ಚಾಲಕರ ಮುಷ್ಕರ, ನೇರ ವೇತನಕ್ಕೆ ಆಗ್ರಹ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಗ್ರಹಣೆಯಲ್ಲಿ ತೊಡಗಿರುವ ಆಟೊ ಚಾಲಕರು, ಸಹಾಯಕರು ಮತ್ತು ಲೋಡರ್‌ಗಳು ತಮ್ಮ ಕೆಲಸವನ್ನು ಕಾಯಂಗೊಳಿಸಿ, ನೇರ ವೇತನ ಪದ್ಧತಿಯಡಿ ತರಬೇಕೆಂದು ಆಗ್ರಹಿಸಿ ಜೂನ್ 24, 2025ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿಯ ಘನತ್ಯಾಜ್ಯ ಸಂಗ್ರಹಣೆಯಲ್ಲಿ ತೊಡಗಿರುವ ಆಟೊ ಚಾಲಕರು, ಸಹಾಯಕರು ಮತ್ತು ಲೋಡರ್‌ಗಳು ತಮ್ಮ ಕೆಲಸವನ್ನು ಕಾಯಂಗೊಳಿಸಿ, ನೇರ ವೇತನ ಪದ್ಧತಿಯಡಿ ತರಬೇಕೆಂದು ಆಗ್ರಹಿಸಿ ಜೂನ್ 24, 2025ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ವಿರುದ್ಧ ಈ ಹೋರಾಟವನ್ನು ಆಯೋಜಿಸಲಾಗಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹವನ್ನೂ ನಡೆಸಲಾಗುವುದು ಎಂದು ಕಾರ್ಮಿಕ ಸಂರಕ್ಷಣಾ ಟ್ರೇಡ್ ಯೂನಿಯನ್ ಅಧ್ಯಕ್ಷ ತ್ಯಾಗರಾಜ್ ತಿಳಿಸಿದ್ದಾರೆ.  2023ರಲ್ಲಿ, ತ್ಯಾಜ್ಯ ನಿರ್ವಹಣೆಯಲ್ಲಿ ಬೆಂಗಳೂರು ಸ್ವಚ್ಛ ಸರ್ವೇಕ್ಷಣದಲ್ಲಿ 43ನೇ ಸ್ಥಾನಕ್ಕೆ ಕುಸಿದಿತ್ತು. ಈ ಮುಷ್ಕರದಿಂದ ನಗರದಾದ್ಯಂತ ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯ ಜೊತೆಗೆ ಕೆ.ಆರ್. ಮಾರ್ಕೆಟ್ ಮತ್ತು ಶಿವಾಜಿನಗರದಂತಹ ಪ್ರದೇಶಗಳಲ್ಲಿ ಕಸದ ರಾಶಿ ಜಮಾವಣೆಯಾಗತ್ತದೆ.

ಹಿನ್ನೆಲೆ ಮತ್ತು ಬೇಡಿಕೆಗಳು

2024ರ ಡಿಸೆಂಬರ್‌ನಲ್ಲಿ ಇದೇ ರೀತಿಯ ಬೇಡಿಕೆಗಳೊಂದಿಗೆ ಪ್ರತಿಭಟನೆ ನಡೆಸಿದಾಗ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದ್ದರು. ಆದರೆ, ಐದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಕಾರ್ಮಿಕರು ಮತ್ತೊಮ್ಮೆ ಹೋರಾಟಕ್ಕೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ಗೆ ಪತ್ರ ಬರೆದಿರುವ ತ್ಯಾಗರಾಜ್, “ನಮ್ಮ ಬೇಡಿಕೆಗಳನ್ನು ಈಡೇರಿಸದೆ, ತ್ಯಾಜ್ಯ ವಿಲೇವಾರಿಗೆ ಹೊಸ ಟೆಂಡರ್ ಕರೆಯಲಾಗಿದೆ. ಇದು ಸರ್ಕಾರದ ಭರವಸೆಗೆ ವಿರುದ್ಧವಾಗಿದೆ,” ಎಂದು ಆಕ್ಷೇಪಿಸಿದ್ದಾರೆ. 

ತ್ಯಾಜ್ಯ ಸಂಗ್ರಹ ವಾಹನಗಳ ಚಾಲಕರು, ಸಹಾಯಕರು ಮತ್ತು ಲೋಡರ್‌ಗಳನ್ನು ಹೊರತುಪಡಿಸಿ, ಆಟೊ ಟಿಪ್ಪರ್ ಮತ್ತು ಕಾಂಪ್ಯಾಕ್ಟರ್ ಲಾರಿಗಳ ನಿರ್ವಹಣೆಗೆ ಮಾತ್ರ ಟೆಂಡರ್ ಆಹ್ವಾನಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದು ಸಾಧ್ಯವಾಗದಿದ್ದರೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರೇ ಸ್ವತಂತ್ರವಾಗಿ ಆಟೊ ಟಿಪ್ಪರ್ ಮತ್ತು ಕಾಂಪ್ಯಾಕ್ಟರ್‌ಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಕೋರಿದ್ದಾರೆ. ಐಪಿಡಿ ಸಲಪ್ಪ ವರದಿಯನ್ನು ಜಾರಿಗೊಳಿಸಿ, ಈ ಕಾರ್ಮಿಕರಿಗೆ ಪೌರಕಾರ್ಮಿಕರ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. 

 ಬೆಂಗಳೂರಿನಲ್ಲಿ ಸುಮಾರು 5,300 ಆಟೊ ಟಿಪ್ಪರ್‌ಗಳು ಮತ್ತು 700 ಕಾಂಪ್ಯಾಕ್ಟರ್ ಲಾರಿಗಳು ತ್ಯಾಜ್ಯ ಸಂಗ್ರಹಣೆಯಲ್ಲಿ ತೊಡಗಿವೆ. ಈ ಮುಷ್ಕರದಿಂದ ಜೂನ್ 25ರಿಂದ ತ್ಯಾಜ್ಯ ಸಂಗ್ರಹಣೆ ಸ್ಥಗಿತಗೊಂಡರೆ, ನಗರದಾದ್ಯಂತ ಕಸದ ರಾಶಿಗಳು ಜಮಾವಣೆಯಾಗಬಹುದು. ಕೆ.ಆರ್. ಮಾರ್ಕೆಟ್‌ನ ವ್ಯಾಪಾರಿಗಳು ಈಗಾಗಲೇ ಕಸದ ರಾಶಿಯಿಂದಾಗಿ ದುರ್ವಾಸನೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. 2025ರ ಮಾರ್ಚ್‌ನಲ್ಲಿ ನಡೆದ ಇಂತಹ ಮುಷ್ಕರದ ಸಂದರ್ಭದಲ್ಲಿ, ಸುಮಾರು 15% ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯವಾಗಿತ್ತು. ಬಿಬಿಎಂಪಿಯು ತಾತ್ಕಾಲಿಕವಾಗಿ 6,000ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ನಿಯೋಜಿಸಿ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸಿತ್ತು.

ಸರ್ಕಾರದ ಪ್ರತಿಕ್ರಿಯೆ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಪೌರಕಾರ್ಮಿಕರನ್ನು ಎರಡು ವರ್ಷಗಳ ಹಿಂದೆ ನೇರ ವೇತನ ಪದ್ಧತಿಯಡಿ ತರಲಾಗಿತ್ತು. ಆದರೆ, ಚಾಲಕರು ಮತ್ತು ಲೋಡರ್‌ಗಳಿಗೆ ಇಂಟಿಗ್ರೇಟೆಡ್ ಸಿಸ್ಟಮ್‌ಗಾಗಿ ಟೆಂಡರ್ ಕರೆಯಲಾಗುತ್ತಿದೆ,” ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವು 2022ರಲ್ಲಿ ಚಾಲಕರು, ಲೋಡರ್‌ಗಳು ಮತ್ತು ಸಹಾಯಕರನ್ನು ನೇರ ವೇತನ ಪದ್ಧತಿಗೆ ತಂದು ಕಾಯಂಗೊಳಿಸುವ ಭರವಸೆಯನ್ನು ನೀಡಿತ್ತು ಎಂದು ಪೌರಕಾರ್ಮಿಕರ ಸಂಘದ ಮೈತ್ರೇಯಿ ಕೃಷ್ಣನ್ ಆರೋಪಿಸಿದ್ದಾರೆ. ಆದರೆ, ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ (BSWML) ಇತ್ತೀಚೆಗೆ 243 ವಾರ್ಡ್‌ಗಳಿಗೆ ಟೆಂಡರ್ ಕರೆದಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

Share:

ಮತ್ತಷ್ಟು ಸುದ್ದಿ

ಮೋದಿಯನ್ನು ಸ್ವಾಗತಿಸಿದ ಬೆನ್ನಲ್ಲೇ ಕರ್ನಾಟಕದ ಪರ ದನಿ ಎತ್ತಿದ ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮನವಿ ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ಕರ್ನಾಟಕಕ್ಕೆ ನಿಮ್ಮ ಸ್ವಾಗತವನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ.

ಟೆಸ್ಲಾದಿಂದ ಬರ್ತಿದೆ 14 ಅಡಿ ಉದ್ದದ ಎಲೆಕ್ಟ್ರಿಕ್ ಕಾರ್

ಭಾರತದ ಶ್ರೀಸಾಮಾನ್ಯನಿಗೆ ಹೊಂದುತ್ತದೆಯೇ? ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ‘ಟೆಸ್ಲಾ’ ಕಂಪನಿಯು ಸದ್ದಿಲ್ಲದೆ ಹೊಸದೊಂದು ಕ್ರಾಂತಿಗೆ ಸಿದ್ಧವಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ

ಚಂದ್ರನ ಕತ್ತಲ ಪಾರ್ಶ್ವದ ಅಪರೂಪದ ಚಿತ್ರಗಳನ್ನು ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಬೆಂಗಳೂರು: ದಶಕಗಳ ಬಳಿಕ ಮಾನವನ ಚಂದ್ರಯಾನದ ಕನಸು ನನಸಾಗುವತ್ತ ದಾಪುಗಾಲು ಹಾಕುತ್ತಿದೆ. ನಾಸಾದ ಮಹತ್ವಾಕಾಂಕ್ಷಿ

ಡಾ. ರಾಜ್‌ಕುಮಾರ್ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಬಿಡುಗಡೆ

ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜೀವನಗಾಥೆಯನ್ನು ಸಾರುವ ಆತ್ಮಚರಿತ್ರೆ

ಮುಂದೆ ಓದಿ »

ಏಪ್ರಿಲ್ 7 ಕೇವಲ ದಿನಾಂಕವಲ್ಲ, ನಮ್ಮ ಬದುಕಿನ ‘ಆರೋಗ್ಯ’ದ ಕನ್ನಡಿ!

ಏಪ್ರಿಲ್ 7 ಎಂದರೆ ಸಾಮಾನ್ಯ ದಿನವಲ್ಲ. ಜಗತ್ತಿನಾದ್ಯಂತ ಈ ದಿನವನ್ನು ಮಹತ್ವದ ಸಂದೇಶಗಳನ್ನು ಹೊತ್ತ ದಿನವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ, World

ಮುಂದೆ ಓದಿ »

ಅನಿಲ ಕೊರತೆ ವಿರುದ್ಧ ಬೆಂಗಳೂರಲ್ಲಿ ಬಾದಲ್ ನಂಜುಂಡಸ್ವಾಮಿ ಸಿಲಿಂಡರ್‌ ಕಲಾಕೃತಿ

ಅಡುಗೆ ಮನೆಗೆ ಯುದ್ಧದ ಬಿಸಿ ಜನಪ್ರತಿನಿಧಿಗಳಿಗೆ ತಲುಪಿಸಲು ಹೊಸ ಪ್ರಯತ್ನ ಬೆಂಗಳೂರು: ಜಾಗತಿಕ ರಾಜಕೀಯದ ಬಿಕ್ಕಟ್ಟು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ,

ಮುಂದೆ ಓದಿ »